Latest Updates
-
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ!
ಫೇಸ್ಬುಕ್ಕಲ್ಲಿ ಕಾವಿ ತೊಟ್ಟ ನೆಟ್-ಸ್ಯಾವಿ ಸ್ವಾಮೀಜಿಗಳು

ಮರೆತೇಹೋಗಿದ್ದ ಚಡ್ಡಿ ಗೆಳೆಯರು ಅಚಾನಕ್ಕಾಗಿ ಸಿಗುತ್ತಾರೆ. ಎಂದೂ ಭೇಟಿಯಾಗಿರದ ಎರಡು ಜೀವಗಳು ಫೇಸ್ಬುಕ್ ಮುಖಾಂತರ ಒಂದಾಗಿರುತ್ತವೆ. ಎರಡು ದೇಹ ಒಂದು ಜೀವ ಎಂಬಂತಿದ್ದ ಜೋಡಿಗಳ ರಹಸ್ಯಗಳೆಲ್ಲ ಇಲ್ಲಿ ಬಯಲಾಗಿವೆ, ವಿಚ್ಛೇದನಗಳಾಗಿವೆ.
ಒಟ್ಟಿನಲ್ಲಿ, ಒಂದು ಪುಟ್ಟ ಜಗತ್ತೇ ಇಲ್ಲಿ ಮನೆಮಾಡಿಕೊಂಡಿದೆ. ನೆಟ್ ಜೊತೆ ಕೊಂಡಿಹಾಕಿಕೊಂಡಿರುವ ಮನುಜರ ಅರ್ಧ ಜೀವನ ಇಲ್ಲೇ ಕಳೆದುಹೋಗಿರುತ್ತದೆ. ಇಲ್ಲಿ ಉಚ್ಚ ನೀಚ, ಮೇಲು ಕೀಳು, ಬಡವ ಬಲ್ಲಿದ, ಮಾನವ ದಾನವ, ಆ ಜಾತಿ ಈ ಜಾತಿ ಎಂಬ ತಾರತಮ್ಯವಿಲ್ಲ.
ಇಲ್ಲಿನ ಜನರದ್ದು ಒಂದು ಜಾತಿ, ಒಂದೇ ಕುಲ. ಅದು ಇಂಟರ್ನೆಟ್ಟಿಗರ ಕುಲ. ಕೀಬೋರ್ಡ್ ಕುಟ್ಟಲು ಕಲಿತ ಮಕ್ಕಳು ಸೇರಿಕೊಂಡಿದ್ದಾರೆ. ಕೊನೆಯ ಸಂದೇಶ ಟೈಪಿಸಿ ಪ್ರಾಣ ಬಿಟ್ಟವರಿದ್ದಾರೆ. ತೋಚಿದ್ದನ್ನು ಬರೆಯಲು ಮತ್ತು ಬರೆದಿದ್ದನ್ನು ಇತರರಿಗೆ ತಲುಪಿಸಲು ದಕ್ಕಿರುವ ಅದ್ಭುತವಾದ ವೇದಿಕೆ.
ಇದೇ ವೇದಿಕೆಗೆ ನಮ್ಮ ಕನ್ನಡ ನಾಡಿನ ಅನೇಕ ಮಠಗಳ ಸ್ವಾಮೀಜಿಗಳು ಬಂದು ಸೇರಿಕೊಂಡಿದ್ದಾರೆ. ಇಡೀ ಜಗತ್ತಿನ ಮಾನವ ಕುಲವನ್ನು ನೆಟ್ ಚಟುವಟಿಕೆಗಳು ಮುಖಾಂತರ ತಲುಪುತ್ತಿದ್ದಾರೆ. ಫೇಸ್ಬುಕ್ ಖಾತೆಯನ್ನು ಅವರೇ ಸೃಷ್ಟಿಸಿದ್ದಾರೋ, ಅವರ ಭಕ್ತಾದಿಗಳು ಸೃಷ್ಟಿಸಿದ್ದಾರೋ...
ಅಂತೂ ಫೇಸ್ಬುಕ್ನಲ್ಲಿ ಸ್ವಾಮೀಜಿಗಳೇನಕರು ಮಠ, ಅನುಭವ ಮಂಟಪವನ್ನು ಕಟ್ಟಿಕೊಂಡಿದ್ದಾರೆ. ಇಂತಿರುವ ಕಾವಿ ತೊಟ್ಟ ನೆಟ್-ಸ್ಯಾವಿ ಸ್ವಾಮೀಜಿಗಳ ಫೇಸ್ ಬುಕ್ ತಾಣವನ್ನು ಪರಿಚಯಿಸುವ ಸರಣಿ ಲೇಖನ ಆರಂಭವಾಗಲಿದೆ, ನಿರೀಕ್ಷಿಸಿ.



Click it and Unblock the Notifications