Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಫೇಸ್ಬುಕ್ಕಿನಲ್ಲಿ ವಿದ್ಯಾಪಾರಂಗತ ಮರುಳಸಿದ್ಧ ಸ್ವಾಮೀಜಿ

ಇನ್ನು ರಾಜಕಾರಣಿಗಳು ಸಂಕಷ್ಟ ಎದುರಾದಾಗ, ಸಂಸತ ಹಂಚಿಕೊಳ್ಳುವಾಗ, ಬೇರೇನೂ ಕೆಲಸವಿಲ್ಲದಾಗ, ಸುಖಾಸುಮ್ಮನೆ ಸ್ವಾಮೀಜಿಗಳ ಕಾಲಿಗೆ ಎರಗಿ ಆಶೀರ್ವಾದ ಪಡೆಯುವುದು, ಸಲಹೆಸೂಚನೆಗಳನ್ನು ತೆಗೆದುಕೊಳ್ಳುವುದು ಎಲ್ಲರಿಗೂ ತಿಳಿದ ವಿಚಾರ. ಇನ್ನು ಅವರನ್ನು ನಂಬುವ ಜನಸಾಮಾನ್ಯರ ಮಾತಂತೂ ಕೇಳುವುದೇ ಬೇಡ. ಸ್ವಾಮೀಜಿಗಳು ಹೇಳಿದ್ದೇ ವೇದವಾಕ್ಯ.
ಇದೇ ಸಮಾಜದಲ್ಲಿ ಖೊಟ್ಟಿ ಸ್ವಾಮೀಜಿಗಳು, ಕಳ್ಳ ಸ್ವಾಮೀಜಿಗಳು, ದಗಲಬಾಜಿ ಸ್ವಾಮೀಜಿಗಳೂ ಇರುತ್ತಾರೆ. ಇವರೆಲ್ಲರ ನಡುವೆ ತಮ್ಮಷ್ಟಕ್ಕೆ ತಾವು ಕೆಲಸ ಮಾಡಿಕೊಂಡು ಲೋಕದ ವ್ಯಾಪಾರವನ್ನು ಗಮನಿಸುತ್ತ, ಜನತೆಯ ಕಷ್ಟಸುಖಗಳಿಗೆ ಸ್ಪಂದಿಸುತ್ತ, ಕಾಲಕ್ಕೆ ತಕ್ಕಂತೆ ತಮ್ಮನ್ನೂ ಅಪ್ಡೇಡ್ ಮಾಡಿಕೊಳ್ಳುವ ವಿದ್ಯಾವಂತ ಸ್ವಾಮೀಜಿಗಳೂ ಅನೇಕರಿದ್ದಾರೆ. ಅಂಥವರಲ್ಲಿ ಒಬ್ಬರು ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ (ಹುಟ್ಟಿದ್ದು 1984ರಲ್ಲಿ).
ನಮಗೆ ತಿಳಿದಿರುವುದು ಒಂದು ಬಿಂದುವಿನಷ್ಟು, ತಿಳಿಯದಿರುವುದು ಸಾಗರದಷ್ಟು ಎಂಬ ನೀತಿವಾಣಿ ಪಾಲಿಸುತ್ತಿರುವ ಯುವ ಸ್ವಾಮೀಜಿಗಳಲ್ಲಿ ಬಸವ ಮರುಳಸಿದ್ಧ ಸ್ವಾಮೀಜಿಯೂ ಒಬ್ಬರು. ಮೂಲತಃ ದಾವಣಗೆರೆಯವರಾದ ಸ್ವಾಮೀಜಿಗಳು ಸದ್ಯಕ್ಕೆ ವಾಸಿಸುತ್ತಿರುವುದು ಶಿವಮೊಗ್ಗದಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪದವಿ ಗಳಿಸಿದ್ದಾರೆ. ಸಂಗೀತ, ಸಾಹಿತ್ಯ, ಸಿನೆಮಾ ಇಷ್ಟಪಡುವ ಸ್ವಾಮೀಜಿಯನ್ನು ಅಪ್ಟುಡೇಟ್ ಸ್ವಾಮೀಜಿ ಅಂದರೂ ಪರವಾಗಿಲ್ಲ. ಧ್ಯಾನ ಮತ್ತು ಬ್ಯಾಡ್ಮಿಂಟನ್ ಆಟವಾಡುವುದು ಅವರಿಗೆ ಅತಿ ಇಷ್ಟವಾದ ಸಂಗತಿಗಳು.
ಫೇಸ್ ಬುಕ್ ನಲ್ಲಿ ಅಡಿಗಾಲಿಟ್ಟಿರುವ ಸ್ವಾಮೀಜಿಗಳು ಸಂಪಾದಿಸಿರುವ ಗೆಳೆಯರು ಮಾತ್ರ ಬೆರಳೆಣಿಕೆಯಷ್ಟು. ಸ್ವಾಮೀಜಿ ದೇಶ ಸುತ್ತಿದ್ದಾರೆ, ಕೋಶ ಓದಿದ್ದಾರೆ. ಇಂಥವರ ಹೆಚ್ಚಿನ ಅಗತ್ಯ ಸಮಾಜಕ್ಕೆ ಯಾವತ್ತಿಗೂ ಇದ್ದೇ ಇರುತ್ತದೆ. ಇದೇ ಡಿಸೆಂಬರ್ 1ರಂದು ತಮ್ಮ 27ನೇ ಹುಟ್ಟುಹಬ್ಬವನ್ನು ಮಕ್ಕಳೊಂದಿಗೆ ಆಚರಿಸಿಕೊಂಡ ಬಸವ ಮರುಳಸಿದ್ಧ ಸ್ವಾಮೀಜಿಗಳ ಫೇಸ್ ಬುಕ್ ಗೆಳೆಯರ ಬಳಗ ಇನ್ನಷ್ಟು ಹೆಚ್ಚಲಿ. [ದಟ್ಸ್ಕನ್ನಡ ಫೇಸ್ಬುಕ್ ಫ್ಯಾನ್ ಕ್ಲಬ್ ಸೇರಿರಿ]



Click it and Unblock the Notifications