Latest Updates
-
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು!
ಇದೇನಿದು ಮುಖ್ಯಮಂತ್ರಿಗಳೇ! ಏನೂ ಅಂತ ಇಂಥ ಮಾತಾಡಿದಿರೀ?

ಏನು ನಿಮ್ಮೀ ಮಾತಿನ ಅರ್ಥ? ಇದರಿಂದ ಭ್ರಷ್ಟರ ಪಟಾಲಂಗೆ ಏನು ಸಂದೇಶ ಹೋಗುತ್ತದೆ ಎಂಬುದರ ಪರಿಜ್ಞಾನ ಇದೆಯಾ ನಿಮಗೆ? ಇರ್ಲಿ ಬಿಡಿ. ಭ್ರಷ್ಟಾತಿಭ್ರಷ್ಟರು ನಿಮ್ಮ ಹೆಗಲ ಮೇಲೆ ಕೈಹಾಕಿಕೊಂಡಿರುವಾಗ (ಒಮ್ಮೆ ಪಕ್ಕದ ಚಿತ್ರ ನೋಡಿ) ನಿಮ್ಮಂಥವರಿಂದ ಇನ್ನೆಂಥ ಮಾತು ಬರಲು ಸಾಧ್ಯ ಅಲ್ಲವೇ!?
ಇದು ನೂರಕ್ಕೆ ನೂರರಷ್ಟು ನಿಮಗೇ ತಿರುಗುಬಾಣವಾಗುವ ಖಾತ್ರಿ ನಮಗಿದೆ, ಗೊತ್ತಾ? ಯಾಕೆ, ಈ ಪಾಟಿ ಹತಾಶರಾದಿರಿ ಸದಾ ಆನಂದದ ಗೌಡರೇ? ಆಯ್ತು. ನ್ಯಾ. ಬನ್ನೂರುಮಠರು ನಿಮ್ಮ ಮಾತನ್ನು ಯಥಾವತ್ತಾಗಿ ಸ್ವೀಕರಿಸಿ ನಾಳೆ ದಿನ ಲೋಕಾಯುಕ್ತರಾದರು ಅಂತಿಟ್ಟುಕೊಳ್ಳಿ. ಆಗ ಏನಾದೀತು ಲೋಕಾಯುಕ್ತದ ಘನತೆ. ಹೋಗಲಿ ಅಂಥಾ 'ನೂರಕ್ಕೆ ನೂರರಷ್ಟು ಪರಿಪೂರ್ಣರಾಗಿ ಇಲ್ಲದ' ಲೋಕಾಯುಕ್ತರಿಂದ ಜನತೆ ಏನನ್ನು ತಾನೇ ನಿರೀಕ್ಷಿಸಿಯಾರು.
'ನೂರಕ್ಕೆ ನೂರರಷ್ಟು ಪರಿಪೂರ್ಣರಾಗಿಲ್ಲದ' ವ್ಯಕ್ತಿಗಳಿಗೆ ಮಣೆ ಹಾಕುವ ಮೂಲಕ ನೀವೇನು ಭ್ರಷ್ಟಾಚಾರವನ್ನು ಸಾರ್ವತ್ರಿಕಗೊಳಿಸ ಬಯಸಿದ್ದೀರಾ? ಶೇಮ್ ಆನ್ ಯು.
ನ್ಯಾ. ಬನ್ನೂರುಮಠರನ್ನು ಲೋಕಾಯುಕ್ತರನ್ನಾಗಿಸುವ ಮೊದಲು 'ನಾನು ನೂರಕ್ಕೆ 99ರಷ್ಟು ಪರಿಪೂರ್ಣನಾಗಿದ್ದೆ. ಸರಿ ನನ್ನನ್ನೇ ಲೋಕಾಯುಕ್ತರನ್ನಾಗಿ ಮಾಡಿ ಎಂದು ನ್ಯಾ. ಶಿವರಾಜ್ ಪಾಟೀಲ್ ನಿಮ್ಮ ಮನೆಯ ಬಾಗಿಲು ಬಡಿದರೆ ಏನು ಉತ್ತರ ನೀಡುವಿರಿ. ಹೆಚ್ಚೇನೂ ಇಲ್ಲ. ಇಬ್ಬರೂ ಒಂದೇ ಬಡಾವಣೆಯ ಫಲಾನುಭವಿಗಳು. 'ನೂರಕ್ಕೆ ನೂರರಷ್ಟು ಪರಿಪೂರ್ಣರಾಗಿ ಇಲ್ಲದ' ಇಬ್ಬರನ್ನು ನೇಮಕ ಮಾಡುವ ಸುಯೋಗ ನಿಮ್ಮದಾಗುತ್ತದೆ. ನೋಡಿ, ಏನು ಮಾಡುತ್ತೀರೋ?



Click it and Unblock the Notifications











