Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಇದೇನಿದು ಮುಖ್ಯಮಂತ್ರಿಗಳೇ! ಏನೂ ಅಂತ ಇಂಥ ಮಾತಾಡಿದಿರೀ?

ಏನು ನಿಮ್ಮೀ ಮಾತಿನ ಅರ್ಥ? ಇದರಿಂದ ಭ್ರಷ್ಟರ ಪಟಾಲಂಗೆ ಏನು ಸಂದೇಶ ಹೋಗುತ್ತದೆ ಎಂಬುದರ ಪರಿಜ್ಞಾನ ಇದೆಯಾ ನಿಮಗೆ? ಇರ್ಲಿ ಬಿಡಿ. ಭ್ರಷ್ಟಾತಿಭ್ರಷ್ಟರು ನಿಮ್ಮ ಹೆಗಲ ಮೇಲೆ ಕೈಹಾಕಿಕೊಂಡಿರುವಾಗ (ಒಮ್ಮೆ ಪಕ್ಕದ ಚಿತ್ರ ನೋಡಿ) ನಿಮ್ಮಂಥವರಿಂದ ಇನ್ನೆಂಥ ಮಾತು ಬರಲು ಸಾಧ್ಯ ಅಲ್ಲವೇ!?
ಇದು ನೂರಕ್ಕೆ ನೂರರಷ್ಟು ನಿಮಗೇ ತಿರುಗುಬಾಣವಾಗುವ ಖಾತ್ರಿ ನಮಗಿದೆ, ಗೊತ್ತಾ? ಯಾಕೆ, ಈ ಪಾಟಿ ಹತಾಶರಾದಿರಿ ಸದಾ ಆನಂದದ ಗೌಡರೇ? ಆಯ್ತು. ನ್ಯಾ. ಬನ್ನೂರುಮಠರು ನಿಮ್ಮ ಮಾತನ್ನು ಯಥಾವತ್ತಾಗಿ ಸ್ವೀಕರಿಸಿ ನಾಳೆ ದಿನ ಲೋಕಾಯುಕ್ತರಾದರು ಅಂತಿಟ್ಟುಕೊಳ್ಳಿ. ಆಗ ಏನಾದೀತು ಲೋಕಾಯುಕ್ತದ ಘನತೆ. ಹೋಗಲಿ ಅಂಥಾ 'ನೂರಕ್ಕೆ ನೂರರಷ್ಟು ಪರಿಪೂರ್ಣರಾಗಿ ಇಲ್ಲದ' ಲೋಕಾಯುಕ್ತರಿಂದ ಜನತೆ ಏನನ್ನು ತಾನೇ ನಿರೀಕ್ಷಿಸಿಯಾರು.
'ನೂರಕ್ಕೆ ನೂರರಷ್ಟು ಪರಿಪೂರ್ಣರಾಗಿಲ್ಲದ' ವ್ಯಕ್ತಿಗಳಿಗೆ ಮಣೆ ಹಾಕುವ ಮೂಲಕ ನೀವೇನು ಭ್ರಷ್ಟಾಚಾರವನ್ನು ಸಾರ್ವತ್ರಿಕಗೊಳಿಸ ಬಯಸಿದ್ದೀರಾ? ಶೇಮ್ ಆನ್ ಯು.
ನ್ಯಾ. ಬನ್ನೂರುಮಠರನ್ನು ಲೋಕಾಯುಕ್ತರನ್ನಾಗಿಸುವ ಮೊದಲು 'ನಾನು ನೂರಕ್ಕೆ 99ರಷ್ಟು ಪರಿಪೂರ್ಣನಾಗಿದ್ದೆ. ಸರಿ ನನ್ನನ್ನೇ ಲೋಕಾಯುಕ್ತರನ್ನಾಗಿ ಮಾಡಿ ಎಂದು ನ್ಯಾ. ಶಿವರಾಜ್ ಪಾಟೀಲ್ ನಿಮ್ಮ ಮನೆಯ ಬಾಗಿಲು ಬಡಿದರೆ ಏನು ಉತ್ತರ ನೀಡುವಿರಿ. ಹೆಚ್ಚೇನೂ ಇಲ್ಲ. ಇಬ್ಬರೂ ಒಂದೇ ಬಡಾವಣೆಯ ಫಲಾನುಭವಿಗಳು. 'ನೂರಕ್ಕೆ ನೂರರಷ್ಟು ಪರಿಪೂರ್ಣರಾಗಿ ಇಲ್ಲದ' ಇಬ್ಬರನ್ನು ನೇಮಕ ಮಾಡುವ ಸುಯೋಗ ನಿಮ್ಮದಾಗುತ್ತದೆ. ನೋಡಿ, ಏನು ಮಾಡುತ್ತೀರೋ?



Click it and Unblock the Notifications