Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಇದೇನಿದು ಮುಖ್ಯಮಂತ್ರಿಗಳೇ! ಏನೂ ಅಂತ ಇಂಥ ಮಾತಾಡಿದಿರೀ?

ಏನು ನಿಮ್ಮೀ ಮಾತಿನ ಅರ್ಥ? ಇದರಿಂದ ಭ್ರಷ್ಟರ ಪಟಾಲಂಗೆ ಏನು ಸಂದೇಶ ಹೋಗುತ್ತದೆ ಎಂಬುದರ ಪರಿಜ್ಞಾನ ಇದೆಯಾ ನಿಮಗೆ? ಇರ್ಲಿ ಬಿಡಿ. ಭ್ರಷ್ಟಾತಿಭ್ರಷ್ಟರು ನಿಮ್ಮ ಹೆಗಲ ಮೇಲೆ ಕೈಹಾಕಿಕೊಂಡಿರುವಾಗ (ಒಮ್ಮೆ ಪಕ್ಕದ ಚಿತ್ರ ನೋಡಿ) ನಿಮ್ಮಂಥವರಿಂದ ಇನ್ನೆಂಥ ಮಾತು ಬರಲು ಸಾಧ್ಯ ಅಲ್ಲವೇ!?
ಇದು ನೂರಕ್ಕೆ ನೂರರಷ್ಟು ನಿಮಗೇ ತಿರುಗುಬಾಣವಾಗುವ ಖಾತ್ರಿ ನಮಗಿದೆ, ಗೊತ್ತಾ? ಯಾಕೆ, ಈ ಪಾಟಿ ಹತಾಶರಾದಿರಿ ಸದಾ ಆನಂದದ ಗೌಡರೇ? ಆಯ್ತು. ನ್ಯಾ. ಬನ್ನೂರುಮಠರು ನಿಮ್ಮ ಮಾತನ್ನು ಯಥಾವತ್ತಾಗಿ ಸ್ವೀಕರಿಸಿ ನಾಳೆ ದಿನ ಲೋಕಾಯುಕ್ತರಾದರು ಅಂತಿಟ್ಟುಕೊಳ್ಳಿ. ಆಗ ಏನಾದೀತು ಲೋಕಾಯುಕ್ತದ ಘನತೆ. ಹೋಗಲಿ ಅಂಥಾ 'ನೂರಕ್ಕೆ ನೂರರಷ್ಟು ಪರಿಪೂರ್ಣರಾಗಿ ಇಲ್ಲದ' ಲೋಕಾಯುಕ್ತರಿಂದ ಜನತೆ ಏನನ್ನು ತಾನೇ ನಿರೀಕ್ಷಿಸಿಯಾರು.
'ನೂರಕ್ಕೆ ನೂರರಷ್ಟು ಪರಿಪೂರ್ಣರಾಗಿಲ್ಲದ' ವ್ಯಕ್ತಿಗಳಿಗೆ ಮಣೆ ಹಾಕುವ ಮೂಲಕ ನೀವೇನು ಭ್ರಷ್ಟಾಚಾರವನ್ನು ಸಾರ್ವತ್ರಿಕಗೊಳಿಸ ಬಯಸಿದ್ದೀರಾ? ಶೇಮ್ ಆನ್ ಯು.
ನ್ಯಾ. ಬನ್ನೂರುಮಠರನ್ನು ಲೋಕಾಯುಕ್ತರನ್ನಾಗಿಸುವ ಮೊದಲು 'ನಾನು ನೂರಕ್ಕೆ 99ರಷ್ಟು ಪರಿಪೂರ್ಣನಾಗಿದ್ದೆ. ಸರಿ ನನ್ನನ್ನೇ ಲೋಕಾಯುಕ್ತರನ್ನಾಗಿ ಮಾಡಿ ಎಂದು ನ್ಯಾ. ಶಿವರಾಜ್ ಪಾಟೀಲ್ ನಿಮ್ಮ ಮನೆಯ ಬಾಗಿಲು ಬಡಿದರೆ ಏನು ಉತ್ತರ ನೀಡುವಿರಿ. ಹೆಚ್ಚೇನೂ ಇಲ್ಲ. ಇಬ್ಬರೂ ಒಂದೇ ಬಡಾವಣೆಯ ಫಲಾನುಭವಿಗಳು. 'ನೂರಕ್ಕೆ ನೂರರಷ್ಟು ಪರಿಪೂರ್ಣರಾಗಿ ಇಲ್ಲದ' ಇಬ್ಬರನ್ನು ನೇಮಕ ಮಾಡುವ ಸುಯೋಗ ನಿಮ್ಮದಾಗುತ್ತದೆ. ನೋಡಿ, ಏನು ಮಾಡುತ್ತೀರೋ?



Click it and Unblock the Notifications











