Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಕೃಷ್ಣಗೆ ಕ್ಲೀನ್ ಚಿಟ್ - ಶಿಡ್ಲಘಟ್ಟ ಮುನಿಯಪ್ಪ ಚಿತ್, ಏಕೆ?

ಅಲ್ಲ ಸ್ವಾಮಿ, ಯಾರ ಕಿವಿ ಮೇಲೆ ಲಾಲ್ ಬಾಗ್ ಇಡ್ಲಿಕ್ಕೆ ಹೊರಟಿದ್ದೀರಿ. ಮುನಿಯಪ್ಪ ಅಕ್ರಮ ಎಸೆಗುತ್ತಿದ್ದಾಗ ಕಣ್ಣಿಗೆ ಗಣಿ ಧೂಳು ಬಿದ್ದು, ಸನ್ಮಾನ್ಯ ಮುಖ್ಯಮಂತ್ರಿ ಕೃಷ್ಣ ಕಣ್ಮುಚ್ಚಿಕೊಂಡಿದ್ದರೆ !? ಅವರನ್ನೇಕೆ ದೋಷಿಯಾಗಿಸಿಲ್ಲ ನೀವು?
ಇನ್ನು, ಮತ್ತೊಬ್ಬ ಮುಖ್ಯಮಂತ್ರಿ ಕುಮಾರ ಸ್ವಾಮಿ ಬಗ್ಗೆ ಪಾಸಿಂಗ್ ಕಾಮೆಂಟ್ ಮಾಡಿದ್ದೀರಂತೆ. ನಿಖರವಾಗಿ ಅವರ ಬಗ್ಗೆ ಯಾವುದೇ ಆರೋಪಗಳು ಇಲ್ವಂತೆ. ಅವರೇ ಹೇಳಿಕೊಂಡು ತಿರುಗ್ತಿದ್ದಾರೆ. ಇದನ್ನು ನಾವು ನಂಬಬೇಕಾ? ಗೌಡರ ಕುಟುಂಬದ ಬಗ್ಗೆ ಯಾಕೆ ನಿಮಗೆ ಈ ವಿಶೇಷ ಪ್ರೀತಿ?
ಮತ್ತೆ, ವಸತಿ ಸಚಿವ ಸೋಮಣ್ಣ ಹೆಸರನ್ನು ಕೈಬಿಟ್ಟಿದ್ದೀರಂತೆ. ಅವರಂತೂ ಆನಂದತುಂದಿಲರಾಗಿದ್ದಾರೆ. ಆದರೆ ನಾವು ಇದನ್ನೂ ನಂಬಬೇಕಾ? ಇಷ್ಟಕ್ಕೂ ನಿಮ್ಮ ವರದಿ ಇನ್ನೂ ಯಾರೆಂದರೆ ಯಾರಿಗೂ ಸಿಕ್ಕಿಲ್ಲ. ಆದರೂ ಸನ್ಮಾನ್ಯ ಆಯನೂರು ಮುಂಜುನಾಥ್ ಹೇಳ್ತಿದ್ದಾರೆ - ನಿಮ್ಮ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರಂತೆ. ಸೋಮಣ್ಣ ಹೆಸರು ಎಲ್ಲೂ ಪ್ರಸ್ತಾಪವಾಗಿಲ್ಲ ಎಂದು ಖಂಡತುಂಡವಾಗಿ ಅವರೇ ಹೇಳಿದ್ದು. ವರದಿ ಮತ್ತೆ ಸೆಲೆಕ್ಟೀವ್ ಲೀಕೇಜ್ ಆಗಿದೆಯೇ?
ಎಲ್ಲಕ್ಕಿಂತ ಮುಖ್ಯವಾದ ವಿಷಯ ಮರೆತಿದ್ದೆ, ಸ್ವಲ್ಪ ಹಳೆ ವಿಷಯ. ಟೆಲಿಫೋನ್ ಟ್ಯಾಪಿಂಗ್ ನಿಂದ ವರದಿ ಸೋರಿಕೆ ಎಂದ್ದೀರಲ್ಲಾ, ಅಲ್ಲಾ ಸ್ವಾಮಿ. ಅದ್ಯಾವ ನಿಮ್ಮ ಪರಮವೈರಿ ಹೀಗೆಲ್ಲ ಪುಟಗಳಗಟ್ಟಲೆ ವರದಿಯನ್ನು ಟೆಲಿಫೋನ್ ನಲ್ಲಿ ಕದ್ದಾಲಿಸಿಕೊಂಡು ಖರಾರುವಕ್ಕಾಗಿ ವರದಿ ಮಾಡಿಕೊಂಡ? ಎಲ್ಲೋ ಹಾರ್ಡ್ ಕಾಪಿನೇ ಲೀಕ್ ಆಗಿರಬೇಕು. ಸ್ವಲ್ಪ ಚೆಕ್ ಮಾಡಿಸಿಕೊಳ್ಳಿ.
ಏನೋ ಸ್ವಾಮಿ ದೊಡ್ಡೋರ ವಿಷ್ಯಾ ನನಗ್ಯಾಕೆ, ಎಲ್ಲಾದರೂ ಹಾಳುಬಿದ್ದು ಹೋಗ್ಲಿ ಬಿಡಿ.



Click it and Unblock the Notifications
