Latest Updates
-
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ!
ಇದ್ಯಾವ ನ್ಯಾಯ, ನ್ಯಾ.ನಿಟ್ಟೆ ಸಂತೋಷ್ ಹೆಗಡೆ ಅವರೇ, ಉತ್ತರಿಸಿ...

ಯುವರ್ ಆನರ್. ನನಗೆ ನಿಮ್ಮ ಬಗ್ಗೆಯೇ ಸ್ವಲ್ಪ ಸಂಶಯ ಮೂಡಿದೆ. ದಯವಿಟ್ಟು ಅದನ್ನು ದೂರ ಮಾಡಿ. ಅಲ್ಲ ನೀವೇ ಹೇಳಿದ್ದೀರಿ. ನೀವು ತನಿಖೆ ನಡೆಸಿದ ಅವಧಿಯಲ್ಲಿ ರಾಜ್ಯದಲ್ಲಿ 16,085 ಕೋಟಿ ರುಪಾಯಿ ಮೌಲ್ಯದ ಗಣಿ ಲೂಟಿ ಆಗಿದೆ ಎನ್ನುತ್ತಿದ್ದೀರಿ. ಅದರಲ್ಲಿ 'ಯಡಿಯೂರಪ್ಪ ಸಂಶಯಾಸ್ಪದ ರೀತಿಯಲ್ಲಿ 40 ಕೋಟಿ ರುಪಾಯಿ ಪಡೆದಿದ್ದಾರೆ' ಎಂದು ಹೇಳಿದ್ದೀರಿ.
ಸೋ, ಇಡೀ ವರದಿಯಲ್ಲಿ ನೀವು ಹೇಳುತ್ತಿರುವುದು ಯಡಿಯೂರಪ್ಪಗೆ ಅಕ್ರಮ ಗಣಿಯಿಂದ 40 ಕೋಟಿ ರು ಮಾತ್ರ ಸಂದಾಯವಾಗಿದೆ ಎಂದೇ? ಅಲ್ಲಿಗೆ ಯಡಿಯೂರಪ್ಪಗೆ 40 ಕೋಟಿ ಬಿಟ್ಟರೆ ಒಂದು ನಯಾ ಪೈಸೆಯೂ ಸಂದಾಯವಾಗಿಲ್ಲವೇ? ಅಂದರೆ ನಿಮ್ಮ 16,085 ಕೋಟಿ ರುಪಾಯಿ ಮೊತ್ತದಲ್ಲಿ ಯಡ್ಡಿ ಹೊಡೆದಿದ್ದು ಕೇವಲ 40 ಕೋಟಿ ಮಾತ್ರವೇ?
ಸ್ವಾಮಿ ಇಡೀ ಪ್ರಪಂಚಕ್ಕೆ ಗೊತ್ತಿರುವ ಗುಟ್ಟೊಂದನ್ನು ನಿಮಗೆ ಹೇಳುವೆ ಕೇಳಿಸಿಕೊಳ್ಳಿ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದುಕೊಂಡು 'ಗಣಿಗಾರಿಕೆ' ಯಿಂದ ಕೋಟ್ಯಂತರ ರುಪಾಯಿ ಗಳಿಸಿದ್ದಾರೆ. ಇದರಲ್ಲಿ ರಾಜ್ಯದ ಜನತೆಗೆ ಯಾವುದೇ ಅನುಮಾನವಿಲ್ಲ. ಅಂತಹುದರಲ್ಲಿ ನೀವ್ಯಾಕೆ ಬರೀ 40 ಕೋಟಿ ಎಂದು ಹೇಳುತ್ತಿದ್ದೀರಿ.



Click it and Unblock the Notifications
