Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಇದ್ಯಾವ ನ್ಯಾಯ, ನ್ಯಾ.ನಿಟ್ಟೆ ಸಂತೋಷ್ ಹೆಗಡೆ ಅವರೇ, ಉತ್ತರಿಸಿ...

ಯುವರ್ ಆನರ್. ನನಗೆ ನಿಮ್ಮ ಬಗ್ಗೆಯೇ ಸ್ವಲ್ಪ ಸಂಶಯ ಮೂಡಿದೆ. ದಯವಿಟ್ಟು ಅದನ್ನು ದೂರ ಮಾಡಿ. ಅಲ್ಲ ನೀವೇ ಹೇಳಿದ್ದೀರಿ. ನೀವು ತನಿಖೆ ನಡೆಸಿದ ಅವಧಿಯಲ್ಲಿ ರಾಜ್ಯದಲ್ಲಿ 16,085 ಕೋಟಿ ರುಪಾಯಿ ಮೌಲ್ಯದ ಗಣಿ ಲೂಟಿ ಆಗಿದೆ ಎನ್ನುತ್ತಿದ್ದೀರಿ. ಅದರಲ್ಲಿ 'ಯಡಿಯೂರಪ್ಪ ಸಂಶಯಾಸ್ಪದ ರೀತಿಯಲ್ಲಿ 40 ಕೋಟಿ ರುಪಾಯಿ ಪಡೆದಿದ್ದಾರೆ' ಎಂದು ಹೇಳಿದ್ದೀರಿ.
ಸೋ, ಇಡೀ ವರದಿಯಲ್ಲಿ ನೀವು ಹೇಳುತ್ತಿರುವುದು ಯಡಿಯೂರಪ್ಪಗೆ ಅಕ್ರಮ ಗಣಿಯಿಂದ 40 ಕೋಟಿ ರು ಮಾತ್ರ ಸಂದಾಯವಾಗಿದೆ ಎಂದೇ? ಅಲ್ಲಿಗೆ ಯಡಿಯೂರಪ್ಪಗೆ 40 ಕೋಟಿ ಬಿಟ್ಟರೆ ಒಂದು ನಯಾ ಪೈಸೆಯೂ ಸಂದಾಯವಾಗಿಲ್ಲವೇ? ಅಂದರೆ ನಿಮ್ಮ 16,085 ಕೋಟಿ ರುಪಾಯಿ ಮೊತ್ತದಲ್ಲಿ ಯಡ್ಡಿ ಹೊಡೆದಿದ್ದು ಕೇವಲ 40 ಕೋಟಿ ಮಾತ್ರವೇ?
ಸ್ವಾಮಿ ಇಡೀ ಪ್ರಪಂಚಕ್ಕೆ ಗೊತ್ತಿರುವ ಗುಟ್ಟೊಂದನ್ನು ನಿಮಗೆ ಹೇಳುವೆ ಕೇಳಿಸಿಕೊಳ್ಳಿ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದುಕೊಂಡು 'ಗಣಿಗಾರಿಕೆ' ಯಿಂದ ಕೋಟ್ಯಂತರ ರುಪಾಯಿ ಗಳಿಸಿದ್ದಾರೆ. ಇದರಲ್ಲಿ ರಾಜ್ಯದ ಜನತೆಗೆ ಯಾವುದೇ ಅನುಮಾನವಿಲ್ಲ. ಅಂತಹುದರಲ್ಲಿ ನೀವ್ಯಾಕೆ ಬರೀ 40 ಕೋಟಿ ಎಂದು ಹೇಳುತ್ತಿದ್ದೀರಿ.



Click it and Unblock the Notifications











