Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಪಾಕ್ ಶಾಲೆಗಳಲ್ಲಿ ಹಿಂದೂ ದ್ವೇಷದ ಪಾಠ: ಅಮೆರಿಕ ಸರಕಾರ

ಇಂತಹ ಪ್ರಚೋದನಕಾರಿ ಅಧ್ಯಾಯಗಳು 4ನೆಯ ತರಗತಿಯಿಂದ ಆರಂಭವಾಗಿ 10ನೆಯ ತರಗತಿ ವರೆಗಿನ ಪಠ್ಯ ಪುಸ್ತಕಗಳಲ್ಲಿ ಢಾಳಾಗಿ ಕಂಡುಬರುತ್ತದೆ.
ಅಲ್ಪಸಂಖ್ಯಾತರಿಗೆ ಪೂರ್ಣ ಹಕ್ಕುಗಳನ್ನು ನೀಡಿರುವ ಸುಧಾರಣಾವಾದಿ ದೇಶ ಎಂದು ತನ್ನನ್ನು ಕರೆದುಕೊಳ್ಳುತ್ತಿದ್ದರೂ ಭಾರತದ ಜತೆಗಿನ ಮೂರು ಯುದ್ಧ ಮತ್ತು ಸತತವಾಗಿ ಅಧಿಕಾರಕ್ಕೆ ಬಂದ ದುರ್ಬಲ ಸರಕಾರಗಳು ಕರ್ಮಠ ಮುಸ್ಲಿಂ ಮತಪಂಡಿತರ ಒತ್ತಡಕ್ಕೆ ಮಣಿದು ಸಮಾಜವನ್ನು ಪೂರ್ತಿಯಾಗಿ ಇಸ್ಲಾಮೀಕರಣಗೊಳಿಸಿವೆ ಎಂದು ವರದಿ ಹೇಳಿದೆ.
ಪಾಕಿಸ್ತಾನದ ಸಾಮಾಜಿಕ ಅಧ್ಯಯನ ಪಠ್ಯ ಪುಸ್ತಕಗಳಲ್ಲಿ ಭಾರತ ಮತ್ತು ಬ್ರಿಟನ್ ವಿರುದ್ಧ ದ್ವೇಷ ಹುಟ್ಟಿಸುವ ಸಂಗತಿಗಳೇ ತುಂಬಿವೆ. ಮಕ್ಕಳಿಗೆ ಮತಾಂಧತೆಯನ್ನು ಬೋಧಿಸುತ್ತಿರುವುದರಿಂದ ಪಾಕಿಸ್ತಾನದಲ್ಲಿ ಧಾರ್ಮಿಕ ಉಗ್ರವಾದ ಬೆಳೆಯುತ್ತಾ ಹೋಗುತ್ತಿದೆ ಹಾಗೂ ಧಾರ್ಮಿಕ ಸ್ವಾತಂತ್ರ್ಯ ದುರ್ಬಲವಾಗುತ್ತಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಸ್ಥಿರತೆ ದುರ್ಬಲವಾಗಿ ಜಾಗತಿಕ ಬೆದರಿಕೆಯಾಗಿ ಪರಿಣಮಿಸುತ್ತದೆ ಎಂದು ವರದಿ ಎಚ್ಚರಿಸಿದೆ.
ಹಿಂದೂಗಳು ಮತ್ತು ಮುಸ್ಲಿಮರು ಶತಮಾನಗಳಿಂದ ಸಹಬಾಳ್ವೆ ಮಾಡುತ್ತಾ ಬಂದಿದ್ದಾರೆಂದು ಇತಿಹಾಸ ಹೇಳುತ್ತಿದ್ದರೂ ಪಠ್ಯ ಪುಸ್ತಕಗಳಲ್ಲಿ ಹಿಂದೂಗಳನ್ನು ಉಗ್ರರು ಮತ್ತು ಇಸ್ಲಾಮ್ನ ವಿರೋಧಿಗಳು ಎಂಬಂತೆ ಚಿತ್ರಿಸಲಾಗಿದೆ. ಹಿಂದೂ ಸಮಾಜವನ್ನು ಕ್ರೂರ ಮತ್ತು ಅನ್ಯಾಯಗಾರರು ಮತ್ತು ಇಸ್ಲಾಮ್ನ ಶಾಂತಿಯ ಮತ್ತು ನ್ಯಾಯದ ಸಂಕೇತ ಎಂದು ಬಣ್ಣಿಸಲಾಗಿದೆ.
ಇಸ್ಲಾಂ ಮೂಲಭೂತವಾದಿಗಳ ಬೆಂಬಲದಿಂದ ಅಧಿಕಾರದಲ್ಲಿದ್ದ ಜಿಯಾ -ಉಲ್- ಹಕ್ ಕಾಲದಲ್ಲೇ ಪಠ್ಯ ಪುಸ್ತಕಗಳ ಇಸ್ಲಾಮೀಕರಣ ಶುರುವಾಗಿತ್ತು. 2006ರಲ್ಲಿ ಸರಕಾರ ಪಠ್ಯ ಪುಸ್ತಕಗಳಲ್ಲಿ ಸುಧಾರಣೆ ಮಾಡಲು ಮುಂದಾದರೂ ತೀವ್ರವಾದಿಗಳ ಒತ್ತಡಕ್ಕೆ ಮಣಿದು ಈ ಪ್ರಯತ್ನವನ್ನು ಕೈಬಿಟ್ಟಿದೆ.



Click it and Unblock the Notifications