Just In
- 49 min ago ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- 59 min ago ಗುರು ಸಂಚಾರ: ಮೇ 1ರಿಂದ 3ನೇ ಸ್ಥಾನದಲ್ಲಿರುವ ಗುರು ಮೀನ ರಾಶಿಯವರಿಗೆ ಅದೃಷ್ಟವೇ?
- 13 hrs ago ಗುರು ಸಂಚಾರದಿಂದ ಕುಂಭ ರಾಶಿಯವರ ಆರ್ಥಿಕ ಬದುಕು ಸುಧಾರಿಸಲಿದೆಯೇ?
- 13 hrs ago ಮೇ 1ರಿಂದ ಗುರು ಮಕರ ರಾಶಿಯಲ್ಲಿ ಪಂಚಮ ಸ್ಥಾನದಲ್ಲಿ ಇರುವುದರಿಂದ ಈ ರೀತಿಯೆಲ್ಲಾ ಪ್ರಯೋಜನಗಳಿವೆ
Don't Miss
- News Priyanka Gandhi V/s Amit Shah: ಕದನ ಕಣ ಬೆಂಗಳೂರು ದಕ್ಷಿಣದಲ್ಲಿ ಪ್ರಿಯಾಂಕಾ ಗಾಂಧಿ, ಅಮಿತ್ ಶಾ ಮುಖಾಮುಖಿ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Movies "ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಾಕ್ ಶಾಲೆಗಳಲ್ಲಿ ಹಿಂದೂ ದ್ವೇಷದ ಪಾಠ: ಅಮೆರಿಕ ಸರಕಾರ
ಇಂತಹ ಪ್ರಚೋದನಕಾರಿ ಅಧ್ಯಾಯಗಳು 4ನೆಯ ತರಗತಿಯಿಂದ ಆರಂಭವಾಗಿ 10ನೆಯ ತರಗತಿ ವರೆಗಿನ ಪಠ್ಯ ಪುಸ್ತಕಗಳಲ್ಲಿ ಢಾಳಾಗಿ ಕಂಡುಬರುತ್ತದೆ.
ಅಲ್ಪಸಂಖ್ಯಾತರಿಗೆ ಪೂರ್ಣ ಹಕ್ಕುಗಳನ್ನು ನೀಡಿರುವ ಸುಧಾರಣಾವಾದಿ ದೇಶ ಎಂದು ತನ್ನನ್ನು ಕರೆದುಕೊಳ್ಳುತ್ತಿದ್ದರೂ ಭಾರತದ ಜತೆಗಿನ ಮೂರು ಯುದ್ಧ ಮತ್ತು ಸತತವಾಗಿ ಅಧಿಕಾರಕ್ಕೆ ಬಂದ ದುರ್ಬಲ ಸರಕಾರಗಳು ಕರ್ಮಠ ಮುಸ್ಲಿಂ ಮತಪಂಡಿತರ ಒತ್ತಡಕ್ಕೆ ಮಣಿದು ಸಮಾಜವನ್ನು ಪೂರ್ತಿಯಾಗಿ ಇಸ್ಲಾಮೀಕರಣಗೊಳಿಸಿವೆ ಎಂದು ವರದಿ ಹೇಳಿದೆ.
ಪಾಕಿಸ್ತಾನದ ಸಾಮಾಜಿಕ ಅಧ್ಯಯನ ಪಠ್ಯ ಪುಸ್ತಕಗಳಲ್ಲಿ ಭಾರತ ಮತ್ತು ಬ್ರಿಟನ್ ವಿರುದ್ಧ ದ್ವೇಷ ಹುಟ್ಟಿಸುವ ಸಂಗತಿಗಳೇ ತುಂಬಿವೆ. ಮಕ್ಕಳಿಗೆ ಮತಾಂಧತೆಯನ್ನು ಬೋಧಿಸುತ್ತಿರುವುದರಿಂದ ಪಾಕಿಸ್ತಾನದಲ್ಲಿ ಧಾರ್ಮಿಕ ಉಗ್ರವಾದ ಬೆಳೆಯುತ್ತಾ ಹೋಗುತ್ತಿದೆ ಹಾಗೂ ಧಾರ್ಮಿಕ ಸ್ವಾತಂತ್ರ್ಯ ದುರ್ಬಲವಾಗುತ್ತಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಸ್ಥಿರತೆ ದುರ್ಬಲವಾಗಿ ಜಾಗತಿಕ ಬೆದರಿಕೆಯಾಗಿ ಪರಿಣಮಿಸುತ್ತದೆ ಎಂದು ವರದಿ ಎಚ್ಚರಿಸಿದೆ.
ಹಿಂದೂಗಳು ಮತ್ತು ಮುಸ್ಲಿಮರು ಶತಮಾನಗಳಿಂದ ಸಹಬಾಳ್ವೆ ಮಾಡುತ್ತಾ ಬಂದಿದ್ದಾರೆಂದು ಇತಿಹಾಸ ಹೇಳುತ್ತಿದ್ದರೂ ಪಠ್ಯ ಪುಸ್ತಕಗಳಲ್ಲಿ ಹಿಂದೂಗಳನ್ನು ಉಗ್ರರು ಮತ್ತು ಇಸ್ಲಾಮ್ನ ವಿರೋಧಿಗಳು ಎಂಬಂತೆ ಚಿತ್ರಿಸಲಾಗಿದೆ. ಹಿಂದೂ ಸಮಾಜವನ್ನು ಕ್ರೂರ ಮತ್ತು ಅನ್ಯಾಯಗಾರರು ಮತ್ತು ಇಸ್ಲಾಮ್ನ ಶಾಂತಿಯ ಮತ್ತು ನ್ಯಾಯದ ಸಂಕೇತ ಎಂದು ಬಣ್ಣಿಸಲಾಗಿದೆ.
ಇಸ್ಲಾಂ ಮೂಲಭೂತವಾದಿಗಳ ಬೆಂಬಲದಿಂದ ಅಧಿಕಾರದಲ್ಲಿದ್ದ ಜಿಯಾ -ಉಲ್- ಹಕ್ ಕಾಲದಲ್ಲೇ ಪಠ್ಯ ಪುಸ್ತಕಗಳ ಇಸ್ಲಾಮೀಕರಣ ಶುರುವಾಗಿತ್ತು. 2006ರಲ್ಲಿ ಸರಕಾರ ಪಠ್ಯ ಪುಸ್ತಕಗಳಲ್ಲಿ ಸುಧಾರಣೆ ಮಾಡಲು ಮುಂದಾದರೂ ತೀವ್ರವಾದಿಗಳ ಒತ್ತಡಕ್ಕೆ ಮಣಿದು ಈ ಪ್ರಯತ್ನವನ್ನು ಕೈಬಿಟ್ಟಿದೆ.