Latest Updates
-
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ
ಜನಾನುರಾಗಿ ಐಎಎಸ್ ಅಧಿಕಾರಿ ಮಣಿವಣ್ಣನ್ 2ನೇ ವಿವಾಹ

ಸುಮಾರು ಮೂರು ವರ್ಷಗಳ ಕಾಲ ಮಣಿವಣ್ಣನ್ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಸಲ್ಮಾ ಆಗಷ್ಟೇ ಐಎಎಸ್ ಪ್ರೊಬೆಷನರಿಯಾಗಿ ಮೈಸೂರಿಗೆ ಬಂದಿಳಿದು ಮಣಿವಣ್ಣನ್ರ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದ್ದರು. ಆಗ ಪರಿಚಯವಾದ ಸ್ನೇಹ ಈಗ ಇಬ್ಬರನ್ನು ದಾಂಪತ್ಯದ ಹೊಸ್ತಿಲಿಗೆ ತಂದು ನಿಲ್ಲಿಸಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿ ಅತ್ಯುತ್ತಮವಾಗಿ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದ ಮಣಿವಣ್ಣನ್ ಬಳಿಕ ರೇಷ್ಮೆ ಇಲಾಖೆ ಆಯುಕ್ತರಾಗಿ, ತದನಂತರ ಈಗ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಈ ಮಧ್ಯೆ ತಮ್ಮ ಮೊದಲ ಪತ್ನಿ ಜತೆಗಿನ ದಾಂಪತ್ಯ ಜೀವನ ಅಷ್ಟೇನೂ ಸುಖಮಯವಾಗಿರಲಿಲ್ಲ. ಅದೇ ಕಾರಣಕ್ಕಾಗಿ ಪತ್ನಿಯಿಂದ ವಿಚ್ಛೇದನ ಪಡೆದುಕೊಳ್ಳಲು ಬಹಳ ಹಿಂದೆಯೇ ಉದ್ದೇಶಿಸಿದ್ದರು. ಇದಕ್ಕೂ ಮುನ್ನ ಸಲ್ಮಾರನ್ನು ವಿವಾಹವಾಗಲು ಕೂಡ ಮಣಿವಣ್ಣನ್ ನಿಶ್ಚಯಿಸಿದ್ದರು ಎನ್ನಲಾಗಿದೆ. ಈಗ ಅಂದುಕೊಂಡಂತೆ ಇಬ್ಬರೂ ದಿಲ್ಲಿಯಲ್ಲಿ ವಿವಾಹವಾಗಿರುವುದನ್ನು ಸ್ವತಃ ಮಣಿವಣ್ಣನ್ ಖಚಿತಪಡಿಸಿದ್ದಾರೆ.



Click it and Unblock the Notifications











