Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಜನಾನುರಾಗಿ ಐಎಎಸ್ ಅಧಿಕಾರಿ ಮಣಿವಣ್ಣನ್ 2ನೇ ವಿವಾಹ

ಸುಮಾರು ಮೂರು ವರ್ಷಗಳ ಕಾಲ ಮಣಿವಣ್ಣನ್ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಸಲ್ಮಾ ಆಗಷ್ಟೇ ಐಎಎಸ್ ಪ್ರೊಬೆಷನರಿಯಾಗಿ ಮೈಸೂರಿಗೆ ಬಂದಿಳಿದು ಮಣಿವಣ್ಣನ್ರ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದ್ದರು. ಆಗ ಪರಿಚಯವಾದ ಸ್ನೇಹ ಈಗ ಇಬ್ಬರನ್ನು ದಾಂಪತ್ಯದ ಹೊಸ್ತಿಲಿಗೆ ತಂದು ನಿಲ್ಲಿಸಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿ ಅತ್ಯುತ್ತಮವಾಗಿ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದ ಮಣಿವಣ್ಣನ್ ಬಳಿಕ ರೇಷ್ಮೆ ಇಲಾಖೆ ಆಯುಕ್ತರಾಗಿ, ತದನಂತರ ಈಗ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಈ ಮಧ್ಯೆ ತಮ್ಮ ಮೊದಲ ಪತ್ನಿ ಜತೆಗಿನ ದಾಂಪತ್ಯ ಜೀವನ ಅಷ್ಟೇನೂ ಸುಖಮಯವಾಗಿರಲಿಲ್ಲ. ಅದೇ ಕಾರಣಕ್ಕಾಗಿ ಪತ್ನಿಯಿಂದ ವಿಚ್ಛೇದನ ಪಡೆದುಕೊಳ್ಳಲು ಬಹಳ ಹಿಂದೆಯೇ ಉದ್ದೇಶಿಸಿದ್ದರು. ಇದಕ್ಕೂ ಮುನ್ನ ಸಲ್ಮಾರನ್ನು ವಿವಾಹವಾಗಲು ಕೂಡ ಮಣಿವಣ್ಣನ್ ನಿಶ್ಚಯಿಸಿದ್ದರು ಎನ್ನಲಾಗಿದೆ. ಈಗ ಅಂದುಕೊಂಡಂತೆ ಇಬ್ಬರೂ ದಿಲ್ಲಿಯಲ್ಲಿ ವಿವಾಹವಾಗಿರುವುದನ್ನು ಸ್ವತಃ ಮಣಿವಣ್ಣನ್ ಖಚಿತಪಡಿಸಿದ್ದಾರೆ.



Click it and Unblock the Notifications