Latest Updates
-
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ?
ಜನಾನುರಾಗಿ ಐಎಎಸ್ ಅಧಿಕಾರಿ ಮಣಿವಣ್ಣನ್ 2ನೇ ವಿವಾಹ

ಸುಮಾರು ಮೂರು ವರ್ಷಗಳ ಕಾಲ ಮಣಿವಣ್ಣನ್ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಸಲ್ಮಾ ಆಗಷ್ಟೇ ಐಎಎಸ್ ಪ್ರೊಬೆಷನರಿಯಾಗಿ ಮೈಸೂರಿಗೆ ಬಂದಿಳಿದು ಮಣಿವಣ್ಣನ್ರ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದ್ದರು. ಆಗ ಪರಿಚಯವಾದ ಸ್ನೇಹ ಈಗ ಇಬ್ಬರನ್ನು ದಾಂಪತ್ಯದ ಹೊಸ್ತಿಲಿಗೆ ತಂದು ನಿಲ್ಲಿಸಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿ ಅತ್ಯುತ್ತಮವಾಗಿ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದ ಮಣಿವಣ್ಣನ್ ಬಳಿಕ ರೇಷ್ಮೆ ಇಲಾಖೆ ಆಯುಕ್ತರಾಗಿ, ತದನಂತರ ಈಗ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಈ ಮಧ್ಯೆ ತಮ್ಮ ಮೊದಲ ಪತ್ನಿ ಜತೆಗಿನ ದಾಂಪತ್ಯ ಜೀವನ ಅಷ್ಟೇನೂ ಸುಖಮಯವಾಗಿರಲಿಲ್ಲ. ಅದೇ ಕಾರಣಕ್ಕಾಗಿ ಪತ್ನಿಯಿಂದ ವಿಚ್ಛೇದನ ಪಡೆದುಕೊಳ್ಳಲು ಬಹಳ ಹಿಂದೆಯೇ ಉದ್ದೇಶಿಸಿದ್ದರು. ಇದಕ್ಕೂ ಮುನ್ನ ಸಲ್ಮಾರನ್ನು ವಿವಾಹವಾಗಲು ಕೂಡ ಮಣಿವಣ್ಣನ್ ನಿಶ್ಚಯಿಸಿದ್ದರು ಎನ್ನಲಾಗಿದೆ. ಈಗ ಅಂದುಕೊಂಡಂತೆ ಇಬ್ಬರೂ ದಿಲ್ಲಿಯಲ್ಲಿ ವಿವಾಹವಾಗಿರುವುದನ್ನು ಸ್ವತಃ ಮಣಿವಣ್ಣನ್ ಖಚಿತಪಡಿಸಿದ್ದಾರೆ.



Click it and Unblock the Notifications