Latest Updates
-
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ!
ಜನಾನುರಾಗಿ ಐಎಎಸ್ ಅಧಿಕಾರಿ ಮಣಿವಣ್ಣನ್ 2ನೇ ವಿವಾಹ

ಸುಮಾರು ಮೂರು ವರ್ಷಗಳ ಕಾಲ ಮಣಿವಣ್ಣನ್ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಸಲ್ಮಾ ಆಗಷ್ಟೇ ಐಎಎಸ್ ಪ್ರೊಬೆಷನರಿಯಾಗಿ ಮೈಸೂರಿಗೆ ಬಂದಿಳಿದು ಮಣಿವಣ್ಣನ್ರ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದ್ದರು. ಆಗ ಪರಿಚಯವಾದ ಸ್ನೇಹ ಈಗ ಇಬ್ಬರನ್ನು ದಾಂಪತ್ಯದ ಹೊಸ್ತಿಲಿಗೆ ತಂದು ನಿಲ್ಲಿಸಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿ ಅತ್ಯುತ್ತಮವಾಗಿ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದ ಮಣಿವಣ್ಣನ್ ಬಳಿಕ ರೇಷ್ಮೆ ಇಲಾಖೆ ಆಯುಕ್ತರಾಗಿ, ತದನಂತರ ಈಗ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಈ ಮಧ್ಯೆ ತಮ್ಮ ಮೊದಲ ಪತ್ನಿ ಜತೆಗಿನ ದಾಂಪತ್ಯ ಜೀವನ ಅಷ್ಟೇನೂ ಸುಖಮಯವಾಗಿರಲಿಲ್ಲ. ಅದೇ ಕಾರಣಕ್ಕಾಗಿ ಪತ್ನಿಯಿಂದ ವಿಚ್ಛೇದನ ಪಡೆದುಕೊಳ್ಳಲು ಬಹಳ ಹಿಂದೆಯೇ ಉದ್ದೇಶಿಸಿದ್ದರು. ಇದಕ್ಕೂ ಮುನ್ನ ಸಲ್ಮಾರನ್ನು ವಿವಾಹವಾಗಲು ಕೂಡ ಮಣಿವಣ್ಣನ್ ನಿಶ್ಚಯಿಸಿದ್ದರು ಎನ್ನಲಾಗಿದೆ. ಈಗ ಅಂದುಕೊಂಡಂತೆ ಇಬ್ಬರೂ ದಿಲ್ಲಿಯಲ್ಲಿ ವಿವಾಹವಾಗಿರುವುದನ್ನು ಸ್ವತಃ ಮಣಿವಣ್ಣನ್ ಖಚಿತಪಡಿಸಿದ್ದಾರೆ.



Click it and Unblock the Notifications
