Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕೌನ್ ಬನೇಗಾ ಕರೋಡ್ ಪತಿಯಲ್ಲಿ ಗುರುವಾರ ಏನೆಲ್ಲ ನಡೆಯಿತು, ಗೊತ್ತಾ?

ಕೆಬಿಸಿ ನಿನ್ನೆಗೆ ಯಶಸ್ವಿಯಾಗಿ ಮೊದಲ ವಾರ ಪೂರೈಸಿದೆ. 'ಕೌನ್ ಬನೇಗಾ ಕರೋಡ್ ಪತಿ'ಯ ಅಧಿಪತಿ ಅಮಿತಾಬ್ ಬಚ್ಚನ್ ಸಾಮಾನ್ಯವಾಗಿ ದಕ್ಷಿಣ ಭಾರತದವರನ್ನು ಹಾಟ್ ಸೀಟ್ ಸಮೀಪಕ್ಕೂ ಬಿಟ್ಟುಕೊಳ್ಳುವುದಿಲ್ಲ ಎಂಬ ಅಪವಾದದ ನಡುವೆಯೂ ಮೊದಲ ವಾರದಲ್ಲಿ ಕನ್ನಡತಿ ರಾಜಲಕ್ಷ್ಮಿ ಕುಮಾರ್ 6.4 ಲಕ್ಷ ರುಪಾಯಿ ಗೆದ್ದುಕೊಂಡಿದ್ದಾರೆ. ರಾಜಲಕ್ಷ್ಮಿ ಪ್ರಸ್ತುತ ಗುಜರಾತಿನ ವಾಪಿಯಲ್ಲಿ ಪತಿ ಮತ್ತು ಪುತ್ರನೊಂದಿಗೆ ವಾಸವಾಗಿದ್ದಾರೆ.
3ನೇ ಪ್ರಶ್ನೆಯ ವೇಳೆಗೇ ರಾಜಲಕ್ಷ್ಮಿ 'ಆಡಿಯನ್ಸ್ ಪೋಲ್ ಲೈಫ್ ಲೈನ್' ನೆರವು ಪಡೆದರು. ಅದೂ ಪ್ರಶ್ನೆ ಯಾವುದರ ಬಗ್ಗೆ ಅಂತ ಕೇಳ್ತೀರಾ? ನಮ್ಮ ನಿಮ್ಮ ಅಚ್ಚುಮೆಚ್ಚಿನ ಉಪ್ಪಿಟ್ಟು ಬಗ್ಗೆ ಕಣ್ರಿ. ಈ ಪ್ರಶ್ನೆಯ ಮೂಲಕ ಮಹಾನ್ ತಿಂಡಿಯಾದ ಉಪ್ಪಿಟ್ಟಿನ ಬಗ್ಗೆ ಮಹಾನ್ ನಟ ಅಮಿತಾಬ್ ಒಂದು ಕುತೂಹಲಕಾರಿ ಸಂಗತಿಯನ್ನು ತಿಳಿಸಿದರು. ಉಪ್ಪು ಮತ್ತು ಹಿಟ್ಟು ಸೇರಿದರೆ ಉಪ್ಪಿಟ್ಟು ಆಗುತ್ತದೆ. ಆದರೆ ಇದನ್ನು ತಮಿಳಿನಲ್ಲಿ ಕೇಳಿದ್ದರಿಂದ ರಾಜಲಕ್ಷ್ಮಿ ಸ್ವಲ್ಪ ಎಡವಿದರು. ಅಮಿತಾಬ್ ರ ಪ್ರಶ್ನೆಗೆ ಡಿ. ಉಪ್ಪಮಾ ರೈಟ್ ಆನ್ಸರ್ ಆಗಿತ್ತು!
ಇರ್ಲಿ ಬಿಡಿ ಮುಂದೇನಾಯಿತು ಕೇಳಿ: ಮತ್ತೊಂದು ಪ್ರಶ್ನೆಗೆ ಕನ್ನಡದವರೇ ಆದ ಡಾ. ಅಜಿತ್ ರಾನಡೆ ಅವರು 'ಎಕ್ಸ್ ಪರ್ಟ್ ಒಪೀನಿಯನ್' ನೀಡಿ ರಾಜಲಕ್ಷ್ಮಿ ಅವರನ್ನು ಪಾರು ಮಾಡಿದರು. ಹೀಗೇ ಪ್ರಶ್ನಾವಳಿ ಸಾಗಿದ್ದಾಗ ಸ್ಪರ್ಧಾಳು ಒಂದು ಕಡೆ ಬಂತು ಥಟ್ಟನೆ ನಿಂತುಬಿಟ್ಟರು. ಆಗ ಅವರಿಗೆ ಥಟ್ಟಂತ ಜ್ಞಾಪಕಕ್ಕೆ ಬಂದಿದ್ದು ಮತ್ತೊಬ್ಬ ಕನ್ನಡಿಗ. 'ಕನ್ನಡದ ಕ್ವಿಜ್ ಮಾಸ್ಟರ್' ಅಮಿತಾಭ್ ಅಥವಾ ಸಿದ್ಧಾರ್ಥ ಬಸು ಎಂದೂ ಇವರನ್ನು ಕರೆಯಬಹುದು. ಅವರೇ ಚಂದನ ವಾಹಿನಿಯ 'ಥಟ್ ಅಂತ ಹೇಳಿ' ಕಾರ್ಯಕ್ರಮದ ಮೂಲಕ ಇತಿಹಾಸ ನಿರ್ಮಿಸಿರುವ ಡಾ. ನಾ. ಸೋಮೇಶ್ವರ್ ಅವರು.
ಯಾಕೋ ನಾ. ಸೋಮೇಶ್ವರ್ ಅವರೂ ಎಡವಿದರು. ಅದರೊಂದಿಗೆ ರಾಜಲಕ್ಷ್ಮಿ ಅವರು 6.4 ಲಕ್ಷ ಬಹುಮಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಕಾರ್ಯಕ್ರಮದಲ್ಲಿ ಉತ್ತಮ ಸ್ಪರ್ಧೆ ನೀಡಿದ ರಾಜಲಕ್ಷ್ಮಿಗೆ ಶುಭಾಶಯಗಳು.



Click it and Unblock the Notifications