Latest Updates
-
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ!
ಶಾಲಾ ಬಾಲಕನ ಆಹುತಿ: ನೆಲಮಂಗಲ ರೆಸಾರ್ಟಲ್ಲಿ ಯಾವುದೂ ಸರಿಯಿಲ್ಲ

ಆತಂಕದ ವಿಷಯವೆಂದರೆ ರೆಸಿಡೆನ್ಸಿ ಹಾಲಿಡೇ ರೆಸಾರ್ಟ್ ನವರು ತಮ್ಮ ರೆಸಾರ್ಟಿಗೆ ವಿವಿಧ ಹೆಸರುಗಳನ್ನು ನೀಡಿ ಶಾಲೆಗಳನ್ನು ವಂಚಿಸುತ್ತಿದೆ. ಈ ಮಧ್ಯೆ, ಪ್ರೆಸಿಡೆನ್ಸಿ ರೆಸಾರ್ಟ್ ಎಂಬ ಹೆಸರಿನ ಇದೇ ರೆಸಾರ್ಟಿಗೆ ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಶಾಲೆಯೂ ಮಕ್ಕಳನ್ನು ಇದೇ ಬುಧವಾರ ಪಿಕ್ನಿಕ್ ಗೆ ಕರೆದುಕೊಂಡು ಹೋಗಲು ಸಜ್ಜಾಗಿದೆ. ಆದರೆ ಪೋಷಕರು ಯಾವುದೇ ಕಾರಣಕ್ಕೂ ತಮ್ಮ ಮಕ್ಕಳನ್ನು ಈ ರೆಸಾರ್ಟಿಗೆ ಕಳಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ವಾಸ್ತವವಾಗಿ, ಹೆಸರಿಗಷ್ಟೇ ಉತ್ತಮ ರೆಸಾರ್ಟ್ ಎನಿಸಿಕೊಂಡಿರುವ ರೆಸಿಡೆನ್ಸಿ ಹಾಲಿಡೇ ರೆಸಾರ್ಟ್ ಅವ್ಯವಸ್ಥೆಗಳ ಆಗರವಾಗಿದೆ. ಇಲ್ಲಿ ಸುರಕ್ಷಾ ಕ್ರಮಗಳು ಇಲ್ಲ. ಬಾಲಕ ತೇಜಸ್ ನ ಸಾವಿಗೆ ಇದೇ ಕಾರಣ ಎಂದು ಪೋಷಕರು ದೂರಿದ್ದಾರೆ.
ಹಣದ ದುರಾಸೆಗೆ ಬಿದ್ದು ಮೂರ್ನಾಲ್ಕು ಶಾಲೆಗಳ ಮಕ್ಕಳನ್ನು ಒಟ್ಟಿಗೇ ಕರೆಸಿಕೊಳ್ಳುವ ಈ ರೆಸಾರ್ಟಿನವರು ಮಕ್ಕಳ ಸುರಕ್ಷತೆಯತ್ತ ಗಮನವೇ ಹರಿಸುತ್ತಿಲ್ಲ. ಇಲ್ಲಿರುವುದು ಎಲ್ಲಾ ಹರಕುಮುರುಕು ಸೌಲಭ್ಯಗಳು. ಸ್ವಿಮ್ಮಿಂಗ್ ಪೂಲ್ ಅಂತೂ ಅಪಾಯದ ಕೂಪವಾಗಿದೆ. ಇನ್ನು ಮಕ್ಕಳಿಗೆ ಇಲ್ಲಿ ನೀಡುವ ತಿಂಡಿ ತಿನಿಸೂ ಕಳಪೆ ಮಟ್ಟದ್ದು. ಇರುವ ನಾಲ್ಕಾರು ಸಿಬ್ಬಂದಿಯೇ ಎಲ್ಲವನ್ನೂ ನಿಭಾಯಿಸಬೇಕಾಗುತ್ತದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಇದೇ ರೆಸಾರ್ಟ್ ಗೆ ಪಿಕ್ ನಿಕ್ ನಿಗದಿಪಡಿಸಿರುವ ಬೇರೆ ಬೇರೆ ಶಾಲೆಗಳ ಮಕ್ಕಳನ್ನು ಇಲ್ಲಿಗೆ ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ತಕ್ಷಣ ಸಂಬಂಧಪಟ್ಟ ಇಲಾಖೆಯವರು ಇಲ್ಲಿಗೆ ಭೇಟಿ ನೀಡಬೇಕು. ಇಲ್ಲಿರುವ ಸೌಲಭ್ಯಗಳ ಬಗ್ಗೆ ತನಿಖೆ ನಡೆಸಬೇಕು. ಪಿಕ್ನಿಕ್ ಹೆಸರಿನಲ್ಲಿ ಮಕ್ಕಳನ್ನು ಇಲ್ಲಿಗೆ ಕರೆತರುವುದಕ್ಕೆ ಅನುಮತಿ ನೀಡಬಾರದು ಎಂದು ಪೋಷಕರು ಸರಕಾರವನ್ನು ಆಗ್ರಹಿಸಿದ್ದಾರೆ.



Click it and Unblock the Notifications