Latest Updates
-
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು
ಶಾಲಾ ಬಾಲಕನ ಆಹುತಿ: ನೆಲಮಂಗಲ ರೆಸಾರ್ಟಲ್ಲಿ ಯಾವುದೂ ಸರಿಯಿಲ್ಲ

ಆತಂಕದ ವಿಷಯವೆಂದರೆ ರೆಸಿಡೆನ್ಸಿ ಹಾಲಿಡೇ ರೆಸಾರ್ಟ್ ನವರು ತಮ್ಮ ರೆಸಾರ್ಟಿಗೆ ವಿವಿಧ ಹೆಸರುಗಳನ್ನು ನೀಡಿ ಶಾಲೆಗಳನ್ನು ವಂಚಿಸುತ್ತಿದೆ. ಈ ಮಧ್ಯೆ, ಪ್ರೆಸಿಡೆನ್ಸಿ ರೆಸಾರ್ಟ್ ಎಂಬ ಹೆಸರಿನ ಇದೇ ರೆಸಾರ್ಟಿಗೆ ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಶಾಲೆಯೂ ಮಕ್ಕಳನ್ನು ಇದೇ ಬುಧವಾರ ಪಿಕ್ನಿಕ್ ಗೆ ಕರೆದುಕೊಂಡು ಹೋಗಲು ಸಜ್ಜಾಗಿದೆ. ಆದರೆ ಪೋಷಕರು ಯಾವುದೇ ಕಾರಣಕ್ಕೂ ತಮ್ಮ ಮಕ್ಕಳನ್ನು ಈ ರೆಸಾರ್ಟಿಗೆ ಕಳಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ವಾಸ್ತವವಾಗಿ, ಹೆಸರಿಗಷ್ಟೇ ಉತ್ತಮ ರೆಸಾರ್ಟ್ ಎನಿಸಿಕೊಂಡಿರುವ ರೆಸಿಡೆನ್ಸಿ ಹಾಲಿಡೇ ರೆಸಾರ್ಟ್ ಅವ್ಯವಸ್ಥೆಗಳ ಆಗರವಾಗಿದೆ. ಇಲ್ಲಿ ಸುರಕ್ಷಾ ಕ್ರಮಗಳು ಇಲ್ಲ. ಬಾಲಕ ತೇಜಸ್ ನ ಸಾವಿಗೆ ಇದೇ ಕಾರಣ ಎಂದು ಪೋಷಕರು ದೂರಿದ್ದಾರೆ.
ಹಣದ ದುರಾಸೆಗೆ ಬಿದ್ದು ಮೂರ್ನಾಲ್ಕು ಶಾಲೆಗಳ ಮಕ್ಕಳನ್ನು ಒಟ್ಟಿಗೇ ಕರೆಸಿಕೊಳ್ಳುವ ಈ ರೆಸಾರ್ಟಿನವರು ಮಕ್ಕಳ ಸುರಕ್ಷತೆಯತ್ತ ಗಮನವೇ ಹರಿಸುತ್ತಿಲ್ಲ. ಇಲ್ಲಿರುವುದು ಎಲ್ಲಾ ಹರಕುಮುರುಕು ಸೌಲಭ್ಯಗಳು. ಸ್ವಿಮ್ಮಿಂಗ್ ಪೂಲ್ ಅಂತೂ ಅಪಾಯದ ಕೂಪವಾಗಿದೆ. ಇನ್ನು ಮಕ್ಕಳಿಗೆ ಇಲ್ಲಿ ನೀಡುವ ತಿಂಡಿ ತಿನಿಸೂ ಕಳಪೆ ಮಟ್ಟದ್ದು. ಇರುವ ನಾಲ್ಕಾರು ಸಿಬ್ಬಂದಿಯೇ ಎಲ್ಲವನ್ನೂ ನಿಭಾಯಿಸಬೇಕಾಗುತ್ತದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಇದೇ ರೆಸಾರ್ಟ್ ಗೆ ಪಿಕ್ ನಿಕ್ ನಿಗದಿಪಡಿಸಿರುವ ಬೇರೆ ಬೇರೆ ಶಾಲೆಗಳ ಮಕ್ಕಳನ್ನು ಇಲ್ಲಿಗೆ ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ತಕ್ಷಣ ಸಂಬಂಧಪಟ್ಟ ಇಲಾಖೆಯವರು ಇಲ್ಲಿಗೆ ಭೇಟಿ ನೀಡಬೇಕು. ಇಲ್ಲಿರುವ ಸೌಲಭ್ಯಗಳ ಬಗ್ಗೆ ತನಿಖೆ ನಡೆಸಬೇಕು. ಪಿಕ್ನಿಕ್ ಹೆಸರಿನಲ್ಲಿ ಮಕ್ಕಳನ್ನು ಇಲ್ಲಿಗೆ ಕರೆತರುವುದಕ್ಕೆ ಅನುಮತಿ ನೀಡಬಾರದು ಎಂದು ಪೋಷಕರು ಸರಕಾರವನ್ನು ಆಗ್ರಹಿಸಿದ್ದಾರೆ.



Click it and Unblock the Notifications