Latest Updates
-
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಶಾಲಾ ಬಾಲಕನ ಆಹುತಿ: ನೆಲಮಂಗಲ ರೆಸಾರ್ಟಲ್ಲಿ ಯಾವುದೂ ಸರಿಯಿಲ್ಲ

ಆತಂಕದ ವಿಷಯವೆಂದರೆ ರೆಸಿಡೆನ್ಸಿ ಹಾಲಿಡೇ ರೆಸಾರ್ಟ್ ನವರು ತಮ್ಮ ರೆಸಾರ್ಟಿಗೆ ವಿವಿಧ ಹೆಸರುಗಳನ್ನು ನೀಡಿ ಶಾಲೆಗಳನ್ನು ವಂಚಿಸುತ್ತಿದೆ. ಈ ಮಧ್ಯೆ, ಪ್ರೆಸಿಡೆನ್ಸಿ ರೆಸಾರ್ಟ್ ಎಂಬ ಹೆಸರಿನ ಇದೇ ರೆಸಾರ್ಟಿಗೆ ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಶಾಲೆಯೂ ಮಕ್ಕಳನ್ನು ಇದೇ ಬುಧವಾರ ಪಿಕ್ನಿಕ್ ಗೆ ಕರೆದುಕೊಂಡು ಹೋಗಲು ಸಜ್ಜಾಗಿದೆ. ಆದರೆ ಪೋಷಕರು ಯಾವುದೇ ಕಾರಣಕ್ಕೂ ತಮ್ಮ ಮಕ್ಕಳನ್ನು ಈ ರೆಸಾರ್ಟಿಗೆ ಕಳಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ವಾಸ್ತವವಾಗಿ, ಹೆಸರಿಗಷ್ಟೇ ಉತ್ತಮ ರೆಸಾರ್ಟ್ ಎನಿಸಿಕೊಂಡಿರುವ ರೆಸಿಡೆನ್ಸಿ ಹಾಲಿಡೇ ರೆಸಾರ್ಟ್ ಅವ್ಯವಸ್ಥೆಗಳ ಆಗರವಾಗಿದೆ. ಇಲ್ಲಿ ಸುರಕ್ಷಾ ಕ್ರಮಗಳು ಇಲ್ಲ. ಬಾಲಕ ತೇಜಸ್ ನ ಸಾವಿಗೆ ಇದೇ ಕಾರಣ ಎಂದು ಪೋಷಕರು ದೂರಿದ್ದಾರೆ.
ಹಣದ ದುರಾಸೆಗೆ ಬಿದ್ದು ಮೂರ್ನಾಲ್ಕು ಶಾಲೆಗಳ ಮಕ್ಕಳನ್ನು ಒಟ್ಟಿಗೇ ಕರೆಸಿಕೊಳ್ಳುವ ಈ ರೆಸಾರ್ಟಿನವರು ಮಕ್ಕಳ ಸುರಕ್ಷತೆಯತ್ತ ಗಮನವೇ ಹರಿಸುತ್ತಿಲ್ಲ. ಇಲ್ಲಿರುವುದು ಎಲ್ಲಾ ಹರಕುಮುರುಕು ಸೌಲಭ್ಯಗಳು. ಸ್ವಿಮ್ಮಿಂಗ್ ಪೂಲ್ ಅಂತೂ ಅಪಾಯದ ಕೂಪವಾಗಿದೆ. ಇನ್ನು ಮಕ್ಕಳಿಗೆ ಇಲ್ಲಿ ನೀಡುವ ತಿಂಡಿ ತಿನಿಸೂ ಕಳಪೆ ಮಟ್ಟದ್ದು. ಇರುವ ನಾಲ್ಕಾರು ಸಿಬ್ಬಂದಿಯೇ ಎಲ್ಲವನ್ನೂ ನಿಭಾಯಿಸಬೇಕಾಗುತ್ತದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಇದೇ ರೆಸಾರ್ಟ್ ಗೆ ಪಿಕ್ ನಿಕ್ ನಿಗದಿಪಡಿಸಿರುವ ಬೇರೆ ಬೇರೆ ಶಾಲೆಗಳ ಮಕ್ಕಳನ್ನು ಇಲ್ಲಿಗೆ ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ತಕ್ಷಣ ಸಂಬಂಧಪಟ್ಟ ಇಲಾಖೆಯವರು ಇಲ್ಲಿಗೆ ಭೇಟಿ ನೀಡಬೇಕು. ಇಲ್ಲಿರುವ ಸೌಲಭ್ಯಗಳ ಬಗ್ಗೆ ತನಿಖೆ ನಡೆಸಬೇಕು. ಪಿಕ್ನಿಕ್ ಹೆಸರಿನಲ್ಲಿ ಮಕ್ಕಳನ್ನು ಇಲ್ಲಿಗೆ ಕರೆತರುವುದಕ್ಕೆ ಅನುಮತಿ ನೀಡಬಾರದು ಎಂದು ಪೋಷಕರು ಸರಕಾರವನ್ನು ಆಗ್ರಹಿಸಿದ್ದಾರೆ.



Click it and Unblock the Notifications