Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶಾಲಾ ಬಾಲಕನ ಆಹುತಿ: ನೆಲಮಂಗಲ ರೆಸಾರ್ಟಲ್ಲಿ ಯಾವುದೂ ಸರಿಯಿಲ್ಲ

ಆತಂಕದ ವಿಷಯವೆಂದರೆ ರೆಸಿಡೆನ್ಸಿ ಹಾಲಿಡೇ ರೆಸಾರ್ಟ್ ನವರು ತಮ್ಮ ರೆಸಾರ್ಟಿಗೆ ವಿವಿಧ ಹೆಸರುಗಳನ್ನು ನೀಡಿ ಶಾಲೆಗಳನ್ನು ವಂಚಿಸುತ್ತಿದೆ. ಈ ಮಧ್ಯೆ, ಪ್ರೆಸಿಡೆನ್ಸಿ ರೆಸಾರ್ಟ್ ಎಂಬ ಹೆಸರಿನ ಇದೇ ರೆಸಾರ್ಟಿಗೆ ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಶಾಲೆಯೂ ಮಕ್ಕಳನ್ನು ಇದೇ ಬುಧವಾರ ಪಿಕ್ನಿಕ್ ಗೆ ಕರೆದುಕೊಂಡು ಹೋಗಲು ಸಜ್ಜಾಗಿದೆ. ಆದರೆ ಪೋಷಕರು ಯಾವುದೇ ಕಾರಣಕ್ಕೂ ತಮ್ಮ ಮಕ್ಕಳನ್ನು ಈ ರೆಸಾರ್ಟಿಗೆ ಕಳಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ವಾಸ್ತವವಾಗಿ, ಹೆಸರಿಗಷ್ಟೇ ಉತ್ತಮ ರೆಸಾರ್ಟ್ ಎನಿಸಿಕೊಂಡಿರುವ ರೆಸಿಡೆನ್ಸಿ ಹಾಲಿಡೇ ರೆಸಾರ್ಟ್ ಅವ್ಯವಸ್ಥೆಗಳ ಆಗರವಾಗಿದೆ. ಇಲ್ಲಿ ಸುರಕ್ಷಾ ಕ್ರಮಗಳು ಇಲ್ಲ. ಬಾಲಕ ತೇಜಸ್ ನ ಸಾವಿಗೆ ಇದೇ ಕಾರಣ ಎಂದು ಪೋಷಕರು ದೂರಿದ್ದಾರೆ.
ಹಣದ ದುರಾಸೆಗೆ ಬಿದ್ದು ಮೂರ್ನಾಲ್ಕು ಶಾಲೆಗಳ ಮಕ್ಕಳನ್ನು ಒಟ್ಟಿಗೇ ಕರೆಸಿಕೊಳ್ಳುವ ಈ ರೆಸಾರ್ಟಿನವರು ಮಕ್ಕಳ ಸುರಕ್ಷತೆಯತ್ತ ಗಮನವೇ ಹರಿಸುತ್ತಿಲ್ಲ. ಇಲ್ಲಿರುವುದು ಎಲ್ಲಾ ಹರಕುಮುರುಕು ಸೌಲಭ್ಯಗಳು. ಸ್ವಿಮ್ಮಿಂಗ್ ಪೂಲ್ ಅಂತೂ ಅಪಾಯದ ಕೂಪವಾಗಿದೆ. ಇನ್ನು ಮಕ್ಕಳಿಗೆ ಇಲ್ಲಿ ನೀಡುವ ತಿಂಡಿ ತಿನಿಸೂ ಕಳಪೆ ಮಟ್ಟದ್ದು. ಇರುವ ನಾಲ್ಕಾರು ಸಿಬ್ಬಂದಿಯೇ ಎಲ್ಲವನ್ನೂ ನಿಭಾಯಿಸಬೇಕಾಗುತ್ತದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಇದೇ ರೆಸಾರ್ಟ್ ಗೆ ಪಿಕ್ ನಿಕ್ ನಿಗದಿಪಡಿಸಿರುವ ಬೇರೆ ಬೇರೆ ಶಾಲೆಗಳ ಮಕ್ಕಳನ್ನು ಇಲ್ಲಿಗೆ ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ತಕ್ಷಣ ಸಂಬಂಧಪಟ್ಟ ಇಲಾಖೆಯವರು ಇಲ್ಲಿಗೆ ಭೇಟಿ ನೀಡಬೇಕು. ಇಲ್ಲಿರುವ ಸೌಲಭ್ಯಗಳ ಬಗ್ಗೆ ತನಿಖೆ ನಡೆಸಬೇಕು. ಪಿಕ್ನಿಕ್ ಹೆಸರಿನಲ್ಲಿ ಮಕ್ಕಳನ್ನು ಇಲ್ಲಿಗೆ ಕರೆತರುವುದಕ್ಕೆ ಅನುಮತಿ ನೀಡಬಾರದು ಎಂದು ಪೋಷಕರು ಸರಕಾರವನ್ನು ಆಗ್ರಹಿಸಿದ್ದಾರೆ.



Click it and Unblock the Notifications