Just In
- 45 min ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 54 min ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 2 hrs ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- 6 hrs ago ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
Don't Miss
- News ಮತದಾನಕ್ಕೆ ಕೌಂಟ್ಡೌನ್: ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಸಿದ್ಧತೆ ಹೇಗಿದೆ?-ಮಾಹಿತಿ
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದ್ದಿ ಮತ್ತು ಪ್ರಚಾರದ ಗ್ಲೋಬಲ್ ಸ್ಯಾಂಡ್ವಿಚ್!
ಈ ರಾಜವೈಭೋಗದ ಮದುವೆಗಾಗಿ ಖರ್ಚಾದದ್ದೆಷ್ಟು? ರಾಜಕುಮಾರಿ ಕೇಟ್ ಮಿಡಲ್ ಟನ್ ಶುಭಲಗ್ನದ ಸಮಯದಲ್ಲಿ ತೊಟ್ಟ ಹಂಸಬಣ್ಣದ ಬಟ್ಟೆಯ ಬೆಲೆಯೆಷ್ಟು? ಯಾರ್ಯಾರು ಬಂದಿದ್ದರು, ಎಂತೆಂಥ ಚಿತ್ರವಿಚಿತ್ರ ದಿರಿಸುಗಳನ್ನು ತೊಟ್ಟಿದ್ದರು? ಕೇಟ್ ತನ್ನ ಉಂಗುರದ ಬೆರಳಿಗೆ ತೊಡಿಸಿಕೊಂಡ ಉಂಗುರ ಯಾರದು? ಇತ್ಯಾದಿ ಇತ್ಯಾದಿ... ರಾಜಮನೆತನದ ಮದುವೆಯೆಂದ ಮೇಲೆ ಖರ್ಚು ಮಾಡಲೇಬೇಕಲ್ಲ! ರಾಜರು ಸಿಂಪಲ್ ಆಗಿ ದೇವಸ್ಥಾನಕ್ಕೆ ಹೋಗಿ ಹಾರ ಬದಲಾಯಿಸಿಕೊಂಡರೆ ಸಾಕೆ?
ಸುದ್ದಿ ಅಂದ ಮೇಲೆ ಸುದ್ದಿಯೆ. ಪ್ರಕಟಿಸಲೇಬೇಕು. ರೈತರ ಮೇಲಿನ ಗುಂಡಿನ ದಾಳಿಯೇ ಆಗಲಿ, ಜಪಾನಿಗೆ ಅಪ್ಪಳಿಸಿದ ಸುನಾಮಿಯೇ ಆಗಲಿ, ಬರಾಕ್ ಒಬಾಮಾ ಬಿಡುಗಡೆ ಮಾಡಿದ ಬರ್ತ್ ಸರ್ಟಿಫಿಕೇಟ್ ಆಗಲಿ, ಎನ್ಆರ್ಎನ್ ನಿವೃತ್ತಿಯ ಸುದ್ದಿಯೇ ಆಗಲಿ, ಮಡಿಕೇರಿಯಲ್ಲಾದ ಭೀಕರ ಮರ್ಡರ್ ಆಗಲಿ, ಭದ್ರಾವತಿಯಲ್ಲಿ ಕೋಳಿ ಸಾಗಾಣಿಕೆ ತರಬೇತಿ ಕೇಂದ್ರದ ಉದ್ಘಾಟನೆಯೇ ಆಗಲಿ, ಮೇಯರ್ ಶಾರದಮ್ಮ ಎಸ್ಎಸ್ಎಲ್ ಸಿ ಸುದ್ದಿಯೇ ಆಗಲಿ ... ಎಲ್ಲವೂ ಸುದ್ದಿಯೇ. ಎಲ್ಲಕ್ಕೂ ತನ್ನದಾದ ಸ್ಥಾನ ಇದ್ದೇ ಇದೆ.
ಆದರೆ, ಯಾರು ಯಾವ ರೀತಿ ಮಾಧ್ಯಮಗಳನ್ನು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಾರೆ ಎಂಬುದು ಇಲ್ಲಿ ಪ್ರಮುಖವಾಗುತ್ತದೆ. ನೆರೆ ರಾಜ್ಯದ ನಟನೊಬ್ಬ ರಾಜಕೀಯ ಪಕ್ಷ ಕಟ್ಟಿದಾಗ ಇಡೀ ದಿನ ಅವನೊಬ್ಬನ ಸುದ್ದಿಯೇ ಆವರಿಸಿಕೊಂಡಿರುತ್ತದೆ. ನಮ್ಮ ರಾಜ್ಯದಲ್ಲಿ ಏನೇ ಘಟಿಸಿದರೂ ಪ್ರಮುಖವಾಗಿ ಸುದ್ದಿಯಾಗುವುದೇ ಇಲ್ಲ. ವಿಲಿಯಂ ಮತ್ತು ಕೇಟ್ ಮದುವೆಯೇ ಆಗಲಿ. ಶತಮಾನದ ಮದುವೆ ಎಂದು ಬಣ್ಣಿಸಿಕೊಂಡಿರುವ ಈ ಮದುವೆ ಕ್ರಿಶ್ಚಿಯನ್ ಸಮುದಾಯದ ಮದುವೆಯಷ್ಟೆ. ಆದರೆ, ಇದಕ್ಕೆ ಕೊಡುತ್ತಿರುವ ಪ್ರಚಾರ ಮಾತ್ರ ನೋಡಿ ಸ್ವಲ್ಪ ಅಸಹನೆ ಉಂಟಾಗುತ್ತಿದೆ.
ಅಲ್ಲರೀ, ನಮ್ಮ ಹಿಂದೂ ಅಥವಾ ಭಾರತದ ಯಾವುದೇ ಧರ್ಮದವರ ಮದುವೆ ನಡೆದರೆ ಈ ಪರಿಯ ಪ್ರಚಾರ ನೀಡುತ್ತಾರಾ? ಆಫ್ ಕೋರ್ಸ್ ದುಡ್ಡು ಕೊಟ್ಟರೆ ಇದಕ್ಕಿಂತಲೂ ಹೆಚ್ಚು ಪ್ರಚಾರ ಮಾಡಿದರೂ ಮಾಡಬಹುದು. ಮದುವೆಯ ಪ್ರಚಾರ ಮಾಡುವವರೂ ಇವರೆ, ಮದುವೆ ನಂತರ ಡೈವೋರ್ಸ್ ಯಾವಾಗ ಅಂತ ವಿಶ್ಲೇಷಣೆ ಮಾಡುವವರೂ ಇವರೆ! ಸುದ್ದಿಯ ಮೌಲ್ಯವೆಲ್ಲಿ ಹೋಯಿತು? ಒಂದಂತೂ ನಿಜ ಈ ಮದುವೆಯಿಂದಾಗಿ ಹಿಂದೂ ಸಂಸ್ಕೃತಿಯ ಭಾರತದಲ್ಲಿ ಕ್ರೈಸ್ತ ಧರ್ಮ ಭರ್ಜರಿ ಪ್ರಚಾರ ಗಿಟ್ಟಿಸಿಕೊಂಡಂತಾಯಿತು. ಇತ್ತೀಚೆಗೆ ತಾನೆ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಪಾಕಿ ಕ್ರಿಕೆಟಿಗರು ಮೈದಾನದಲ್ಲೇ ನಮಾಜ್ ಮಾಡಿದ್ದರು, ಮಾಡಲು ಅವಕಾಶ ನೀಡಲಾಗಿತ್ತು.
ನಮ್ಮದು ಎಂಥ ಸಮಾಜವೆಂದರೆ, ಯಾವುದೋ ಸಾರ್ವಜನಿಕ ಸ್ಥಳದಲ್ಲಿ ಹೋಮಹವನ ಮಾಡಿದರೆ, ನಮ್ಮವರೇ ತಿರುಗಿಬಿದ್ದಿರುತ್ತಾರೆ. ಎಲ್ಲೋ ತಲೆಮರೆಸಿಕೊಂಡಿದ್ದ ಬುದ್ಧಿಜೀವಿಗಳು ಇದ್ದಕ್ಕಿದ್ದಂತೆ ಪ್ರತ್ಯಕ್ಷರಾಗಿಬಿಡುತ್ತಾರೆ. ನಾಲ್ಕಾರು ಗಡ್ಡಧಾರಿಗಳು ಜುಬ್ಬಾ ಪೇಜಾಮಾ ಧರಿಸಿ ರೋಡಿಗೆ ಇಳಿದೇ ಬಿಡುತ್ತಾರೆ. ನಮ್ಮದು ಜಾತ್ಯತೀತ ರಾಷ್ಟ್ರ, ಒಂದು ಧರ್ಮಕ್ಕೆ ಇಷ್ಟ್ಯಾಕೆ ಪ್ರಚಾರ ಕೊಡಬೇಕು ಎಂದು ಬತ್ತಳಿಕೆಯಿಂದ ಮಾತಿನ ಬಾಣ ಎಸೆಯಲು ಶುರುಮಾಡುತ್ತಾರೆ. ಇದ್ಯಾಕೆ ಹೀಗೆ?