Latest Updates
-
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ!
ವಿಚ್ಛೇದನವೇನೋ ಆಯಿತು? ಮುಂದಿನ ಜೀವನ ಹೇಗೆ?

ಮುಂದೆ? ಎಂಬ ಪ್ರಶ್ನೆಗೆ ಆತ ಕಕ್ಕಾಬಿಕ್ಕಿಯೂ ಆಗಲಿಲ್ಲ, ಆತನ ಬಳಿ ಅದಕ್ಕೆ ಉತ್ತರವೂ ಇರಲಿಲ್ಲ. ಪುರುಷರಿಗೆ ಆ ಪ್ರಶ್ನೆ ಹೆಚ್ಚಾಗಿ ಕಾಡುವುದೂ ಇಲ್ಲ. ಕಾಡಿದರೂ ತೋರ್ಪಡಿಸಿಕೊಳ್ಳುವುದಿಲ್ಲ. ಆದರೆ, ವಿಚ್ಛೇದಿತ ಮಹಿಳೆಯರ ನಂತರದ ಜೀವನ ತೀರಾ ಭಿನ್ನ. ಸಮಾಜ ನಾನಾ ಪ್ರಶ್ನೆಗಳನ್ನು ಎಸೆಯುತ್ತದೆ.
ಆ ಪ್ರಶ್ನೆಗಳನ್ನು ನಿರ್ಭೀತರಾಗಿ ಎದುರಿಸುವ ಛಾತಿ ಕೆಲವರಲ್ಲಿರುತ್ತದೆ, ಅನೇಕರು ನಮ್ಮ ಹಣೆಬರಹವೇ ಇಷ್ಟು ಅಂತ ಚಿಪ್ಪಿನೊಳಗೆ ಹುದುಗಿಕೊಂಡೇ ಕಾಲ ದೂಡುತ್ತಾರೆ. ವಿಚ್ಛೇದನದ ನಂತರದ ದಿನಗಳನ್ನು ಎದುರಿಸುವುದು ಪುರುಷರಿಗೇ ಆಗಲಿ, ಸ್ತ್ರೀಯರಿಗೇ ಆಗಲಿ ನಿಜಕ್ಕೂ ಸವಾಲಿನ ಕೆಲಸ. ಮನಸ್ಸಿದ್ದಲ್ಲಿ ಮಾರ್ಗವಿದ್ದೇ ಇರುತ್ತದೆ.
1) ಮನದಲ್ಲಿ ಶಾಂತಿ ಇರಲಿ : ಆಘಾತಕಾರಿ ಘಟನೆಗಳನ್ನೆಲ್ಲ ಮರೆತು ಧ್ಯಾನ, ಯೋಗ, ಓದಿನ ಮುಖಾಂತರ ಮನಸ್ಸನ್ನು ಸಾಧ್ಯವಾದಮಟ್ಟಿಗೆ ತಹಬದಿಗೆ ತರಲು ಪ್ರಯತ್ನಿಸಬೇಕು. ಎಂಥದೇ ಪ್ರರಿಸ್ಥಿತಿ ಬಂದರೂ ಧೈರ್ಯವಾಗಿ ಎದುರಿಸಲು ಮನಸ್ಸನ್ನು ಹುರಿಗೊಳಿಸಬೇಕು. ಮಹಾತ್ಮಾ ಗಾಂಧೀಜಿ ಬೋಧಿಸಿದ ಮೂರು ಮಂಗಗಳ ತತ್ವವನ್ನು ಪರಿಪಾಲಿಸಬೇಕು.
2) ಕೆಲಸದಲ್ಲಿ ತೊಡಗಿಸಿಕೊಳ್ಳಿ : ವೃತ್ತಿ ಅಥವಾ ಅಧ್ಯಯನದಲ್ಲಿ ತೊಡಗಿಕೊಳ್ಳುವ ಮುಖಾಂತರ ಕಹಿ ನೆನಪುಗಳು ಹತ್ತಿರವೂ ಸುಳಿಯದಂತೆ ನೋಡಿಕೊಳ್ಳಿ. ಮಕ್ಕಳಿದ್ದರಂತೂ ಅವರನ್ನು ಸಾಕುವ ಜವಾಬ್ದಾರಿಯೂ ನಿಮ್ಮ ಮೇಲೆ ಇರುತ್ತದೆ. ಆದಿದ್ದಾಯಿತು ಅಂತ ಸೋಲನ್ನೊಪ್ಪಿಕೊಳ್ಳುವುದು ಸುಲಭ, ಆದರೆ ದುಡಿಮೆಯ ಮುಖಾಂತರ ಹೊಸ ಜೀವನವನ್ನು ಮತ್ತೆ ರೂಪಿಸಿಕೊಳ್ಳುವದು ಬಲು ಕಷ್ಟ.
3) ಸಂತೋಷವಗಿರಿ : ಜೀವನವನ್ನು ಬೇರೊಂದು ದೃಷ್ಟಿಕೋನದಿಂದ ನೋಡಲು ಪ್ರಾಂಭಿಸಿ. ಹೊಸ ಸ್ನೇಹಿತರನ್ನು ಸಂಪಾದಿಸಿ. ಸಂತೋಷ ಮತ್ತು ದುಃಖಗಳನ್ನು ಮುಕ್ತವಾಗಿ ಹಂಚಿಕೊಳ್ಳಿ. ಕೆಲವರು ನಿಮ್ಮ ದುಃಖಗಳಿಗೆ ಹೆಗಲು ಕೊಡಬಹುದು. ಆದರೆ, ಹೆಗಲು ಕೊಡಬೇಕೆಂದು ನಿರೀಕ್ಷಿಸಬೇಡಿ. ಸಣ್ಣಪುಟ್ಟ ಸಂಗತಿಗಳಿಗೂ ಸಂತೋಷಪಡುವುದನ್ನು ರೂಢಿಸಿಕೊಳ್ಳಿ. ಆಗ, ಆನಂದವೇ ನಿಮ್ಮನ್ನು ಆವರಿಸಿಕೊಳ್ಳಲು ಆರಂಭಿಸುತ್ತದೆ.
4) ಹೊಸ ಸಂಬಂಧಗಳಿಗೆ ಮುಕ್ತವಾಗಿರಿ : ವಿಚ್ಛೇದನವಾದರೆ ಜೀವನವೇನೂ ಮುಗಿದು ಹೋಗುವುದಿಲ್ಲ. ಅಸಲಿಗೆ ಅಲ್ಲಿಂದಲೇ ಹೊಸ ಲೋಕಕ್ಕೆ ಬಾಗಿಲು ತೆರೆಯಬೇಕು. ಇಂದಿನ ಆಧುನಿಕ ಸಮಾಜದಲ್ಲಿ ಹಳೆಯ ಕಾಲದವರಂತೆ ಬದುಕಿರಲು ಸಾಧ್ಯವಿಲ್ಲ. ಹೀಗಾಗಿ ಹೊಸ ಸಂಬಂಧಗಳಿಗೆ ಯಾವತ್ತೂ ಮುಕ್ತವಾಗಿರಿ. ಆದಿದ್ದಾಗಲಿ ಅಂತ ಮುಂದೆ ಇಟ್ಟ ಹೆಜ್ಜೆಯನ್ನು ಹಿಂದಕ್ಕೆ ಇಡಬೇಡಿ.
5) ಹಳೆ ತಪ್ಪುಗಳ ಪುನರಾವರ್ತನೆ ಬೇಡ : ಹೊಸ ಸಂಗಾತಿ ಸಿಕ್ಕಾಗ ಹಿಂದೆ ಮಾಡಿದ ತಪ್ಪುಗಳು ಮರುಕಳಿಸದಂತೆ ಜಾಗೃತವಾಗಿರಿ ಮತ್ತು ಯಾವುದನ್ನೂ ಮುಚ್ಚಿಡಬೇಡಿ. ಹಿಂದೆ ನಿಮ್ಮಿಂದಲೇ ತಪ್ಪುಗಳಾಗಿದ್ದರೆ ತಿದ್ದಿಕೊಳ್ಳಲು ಇದಕ್ಕಿಂತ ಉತ್ತಮ ಅವಕಾಶ ಮತ್ತೆ ದೊರೆಯುವುದಿಲ್ಲ. ಜೀವನಶೈಲಿ ಬದಲಿಸಿಕೊಳ್ಳಿ, ಜೀವನ ಸರಳವಾಗಿರಲಿ, ಸಂತಸದಿಂದ ಕೂಡಿರಲಿ.



Click it and Unblock the Notifications