ಯಡಿಯೂರಪ್ಪ ಜಾಮೀನು ಅರ್ಜಿ ಏನಾಯಿತು?

By Super

test
ಬೆಂಗಳೂರು, ಮೇ 29: ಬಿಜೆಪಿ ಪಕ್ಷದ ಗೇಲ್, ಯಡಿಯೂರಪ್ಪಗೆ ಇಂದು ಬೇಲ್ ಸಿಗುತ್ತಾ? ಒಂದು ವೇಳೆ ಸಿಬಿಐ ವಿಶೇಷ ನ್ಯಾಯಾಲಯವು ಯಡಿಯೂರಪ್ಪಗೆ ಇಂದು ಜಾಮೀನು ನಿರಾಕರಿಸಿದರೆ ಯಡಿಯೂರಪ್ಪ ಅವರನ್ನು ಸಿಬಿಐ ಇಂದೇ ಬಂಧಿಸುವ ಸಾಧ್ಯತೆಗಳು ದಟ್ಟವಾಗಿವೆ. ಹಾಗಾದಲ್ಲಿ ಯಡಿಯೂರಪ್ಪಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಜನಾರ್ದನ ರೆಡ್ಡಿ ಜತೆಯಾಗಲಿದ್ದಾರೆ.

ತಾಜಾ ವರದಿ: ಸಿಬಿಐ ವಿಶೇಷ ಕೋರ್ಟ್ ಯಡಿಯೂರಪ್ಪ ಜಾಮೀನು ಅರ್ಜಿ ವಿಚಾರಣೆಯನ್ನು ಜೂನ್ 1ಕ್ಕೆ ಮುಂದೂಡಿದೆ. ಇದರಿಂದ ಯಡಿಯೂರಪ್ಪ ಅವರು ನಾಳೆ, ನಾಳಿದ್ದು ತಮ್ಮ ಮೊಮ್ಮಗಳ ಮದುವೆಯಲ್ಲಿ ನಿರಾತಂಕವಾಗಿ ಭಾಗವಹಿಸಬಹುದು.

ಗಣಿ ಲಂಚ ಮತ್ತು ಡಿನೋಟಿಫಿಕೇಷನ್‌ ಪ್ರಕರಣಗಳಲ್ಲಿ ಸಿಬಿಐ ತನಿಖೆ ಆರಂಭಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತವರ ಕುಟುಂಬ ಸದಸ್ಯರು ಬಂಧನದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆಯು ಅಧೀನ ನ್ಯಾಯಾಲಯವೊಂದರಲ್ಲಿ ಕಳೆದ ವಾರ ನಡೆದಿತ್ತು.

Story first published: Tuesday, May 29, 2012, 15:31 [IST]
X
Desktop Bottom Promotion